ರಂಜನ್ ಗೊಗೋಯ್ 
ದೇಶ

ಮಹತ್ವದ ಪ್ರಕರಣಗಳ ತ್ವರಿತಗತಿಯ ವಿಚಾರಣೆಗೆ ಮೊದಲ ಆದ್ಯತೆ: ಗೊಗೋಯ್

ಮಹತ್ವದ ಪ್ರಕರಣಗಳ ತ್ವರಿತಗತಿಯ ವಿಚಾರಣೆಗೆ ಮೊದಲ ಆದ್ಯತೆ ನೀಡುವುದಾಗಿ ಸುಪ್ರೀಂಕೋರ್ಟ್ ನ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ...

ನವದೆಹಲಿ: ಮಹತ್ವದ ಪ್ರಕರಣಗಳ ತ್ವರಿತಗತಿಯ ವಿಚಾರಣೆಗೆ ಮೊದಲ ಆದ್ಯತೆ ನೀಡುವುದಾಗಿ ಸುಪ್ರೀಂಕೋರ್ಟ್ ನ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯ್ ಹೇಳಿದ್ದಾರೆ.
ಸುಪ್ರೀಂಕೋರ್ಟ್ ನ 46ನೇ ಮುಖ್ಯ ನ್ಯಾಯಾಧೀಶರಾಗಿ ಪ್ರಮಾಣ ವತಚನ ಸ್ವೀಕರಿಸಿ ಮಾತನಾಡಿದ  ಅವರು ತ್ವರಿತಗತಿಯ ಪ್ರಕರಣಗಳ ವಿಚಾರಣೆಗೆ ಮೊದಲ ಆದ್ಯತೆ ನೀಡಲಾಗುವುದು, ಕೆಲವು ಮಾನದಂಡ ನಿಗಧಿ ಪಡಿಸುವವರೆಗೆ ಈ ವಿಧಾನ ಮುಂದುವರಿಯಲಿದೆ ಎಂದು ತಿಳಿಸಿದ್ದಾರೆ,
ನಿಗದಿ ಮಾನದಂಡಗಳ ಬಗ್ಗೆ ನಾವು ಕೆಲಸ ಮಾಡುತ್ತಿದ್ದು, ಅದು ಹೇಗೆ ನಡೆಯುತ್ತದೆ ಎಂಬುದನ್ನು ನೋಡುತ್ತೇವೆ ಎಂದು ತಿಳಿಸಿದ್ದಾರೆ. ಒಂದು ವೇಳೆ ನಾಳೆಯೇ ಕೆಲವರು ಗಲ್ಲು ಶಿಕ್ಷೆಗೆ ಒಳಗಾಗುತ್ತಿದ್ದಾರೆ ಎಂದು ತಿಳಿದು ಬಂದರೆ ಅಂತಹ ಕೇಸ್ ಗಳ ಬಗ್ಗೆ ಗಮನ ಹರಿಸುತ್ತೇವೆ ಎಂದು ಹೇಳಿದ್ದಾರೆ.
ದೆಹಲಿಯ ರಾಷ್ಟ್ರಪತಿ ಭವನದಲ್ಲಿ  63 ವರ್ಷದ ರಂಜನ್ ಗೊಗೋಯ್ ಅವರು ಪ್ರಮಾಣ ವಚನ ಸ್ವೀಕರಿಸಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರಮಾಣ ವಚನ ಬೋಧಿಸಿದರು, ಜಸ್ಟೀಸ್ ಗಗೋಯ್ ಅವರ ಅಧಿಕಾರವಧಿ13 ತಿಂಗಳಿದೆ. ಅಂದರೆ ನವೆಂಬರ್ 17 2019ಕ್ಕೆ ಅವರ ಸೇವಾವಧಿ ಇರಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT