ಸಾಂದರ್ಭಿಕ ಚಿತ್ರ 
ದೇಶ

ಮಗನ ಸಾವಿನಿಂದ ಕಂಗೆಟ್ಟ ಮುಸ್ಲಿಂ ತಂದೆ ಹಿಂದೂ ಧರ್ಮಕ್ಕೆ ಮತಾಂತರ!

ಮಗನ ಕೊಲೆ ಪ್ರಕರಣವನ್ನು ಸ್ವಾಭಾವಿಕ ಸಾವು ಎಂದು ದಾಖಲಿಸಿದೆ ಪೊಲೀಸರ ವರ್ತನೆಯಿಂದ ಮನನೊಂದ ತಂದೆಯೊಬ್ಬ ತನ್ನ ಕುಟುಂಬದ ...

ಬಾಘ್ಘತ್: ಮಗನ ಕೊಲೆ ಪ್ರಕರಣವನ್ನು ಸ್ವಾಭಾವಿಕ ಸಾವು ಎಂದು ದಾಖಲಿಸಿದೆ ಪೊಲೀಸರ ವರ್ತನೆಯಿಂದ ಮನನೊಂದ ತಂದೆಯೊಬ್ಬ ತನ್ನ ಕುಟುಂಬದ ಸದಸ್ಯರೊಂದಿಗೆ ಮುಸ್ಲಿಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ.
ಭದ್ರಕಾ ಗ್ರಾಮದ  ನಿವಾಸಿಯಾದ ಅಖ್ತರ್ ಸೋಮವಾರ ತನ್ನ ಕುಟುಂಬದ 12 ಮಂದಿ ಸದಸ್ಯರೊಂದಿಗೆ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಈ ಸಂಬಂಧ ಪ್ರಮಾಣ ಪತ್ರವನ್ನು ಉಪ ವಿಭಾಗಾಧಿಕಾರಿ ಅವರಿಗೆ ಸಲ್ಲಿಸಿದ್ದಾರೆ, ಜೊತೆಗೆ ತಾವು ಸ್ವ ಇಚ್ಚೆಯಿಂದ ಮತಾಂತರಗೊಂಡಿರುವುದಾಗಿ ತಿಳಿಸಿದ್ದಾರೆ.
ಪೊಲೀಸರು ತಮ್ಮ ಮಗನ ಸಾವಿನ ಪ್ರಕರಣವನ್ನು ಸರಿಯಾದ ರೀತಿಯಲ್ಲಿ ತನಿಖೆ ಮಾಡಲಿಲ್ಲ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕೆಲ ತಿಂಗಳುಗಳ ಹಿಂದೆ ಅಖ್ತರ್ ಪುತ್ರ ಸಾವನ್ನಪ್ಪಿದ್ದ, ಆದರೆ ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆ ನಡೆಸಿಲ್ಲ, ಅಕ್ತರ್ ಪುತ್ರ ಗುಲ್ಷನ್ ಕೊಲೆಯಾಗಿತ್ತು, ಆದರೆ ಅದನ್ನು  ಆತ್ಮಹತ್ಯೆ ಎಂದು ಬಿಂಬಿಸಲಾಗಿತ್ತು, ಈ ಸಂಬಂಧ ತಮಗೆ ಸಹಾಯ ಮಾಡುವಂತೆ ತಮ್ಮ ಸಮುದಾಯದವರನ್ನು ಕೇಳಿದ್ದರು. ಆದರೆ ಯಾರೋಬ್ಬರು ಅವರ ಸಹಾಯಕ್ಕೆ ಬರಲಿಲ್ಲ,  ಹೀಗಾಗಿ ಅಕ್ತರ್ ಕುಟುಂಬಸ್ಥರು ತಮ್ಮ ಧರ್ಮವನ್ನು ಬದಲಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT