ಅಮಿತ್ ಶಾ 
ದೇಶ

ಸೋಹ್ರಾಬುದ್ದೀನ್ ಪ್ರಕರಣ: ಅಮಿತ್ ಶಾ ಖುಲಾಸೆಗೆ ಸಿಬಿಐ ಸಮರ್ಥನೆ

ಸೋಹ್ರಾಬುದ್ದೀನ್ ಎನ್ ಕೌಂಟರ್ ಪ್ರಕರಣದಲ್ಲಿ ಇಂದಿನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಘಟನೆ ನಡೆದಾಗಿನ ಗುಜರಾತ್ ಗೃಹ ಸಚಿವ ಅಮಿತ್ ಶಾ ಅವರನ್ನು ಖುಲಾಸೆಗೊಳಿಸಿರುವುದನ್ನು ಸಿಬಿಐ ಬಾಂಬೆ

ಮುಂಬೈಸೋಹ್ರಾಬುದ್ದೀನ್ ಎನ್ ಕೌಂಟರ್ ಪ್ರಕರಣದಲ್ಲಿ ಇಂದಿನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಘಟನೆ ನಡೆದಾಗಿನ ಗುಜರಾತ್ ಗೃಹ ಸಚಿವ ಅಮಿತ್ ಶಾ ಅವರನ್ನು ಖುಲಾಸೆಗೊಳಿಸಿರುವುದನ್ನು ಸಿಬಿಐ ಬಾಂಬೆ ಹೈಕೋರ್ಟ್ ನಲ್ಲಿ ಸಮರ್ಥಿಸಿಕೊಂಡಿದೆ. 
ಅಮಿತ್ ಶಾ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸದೇ ಇದ್ದ ಸಿಬಿಐ ನಡೆಯನ್ನು ಪ್ರಶ್ನಿಸಿ ಬಾಂಬೆ ಹೈಕೋರ್ಟ್ ನಲ್ಲಿ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಗೆ ಸ್ಪಷ್ಟನೆ ನೀಡಿರುವ ಸಿಬಿಐ, ಅಮಿತ್ ಶಾ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿರುವುದು ಜಾಗೃತ ಹಾಗೂ ಜವಾಬ್ದಾರಿಯುತ ತೀರ್ಮಾನವೇ ಆಗಿದೆ ಎಂದು ಸಮರ್ಥಿಸಿಕೊಂಡಿದೆ. ಅಷ್ಟೇ ಅಲ್ಲದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ರಾಜಕೀಯ ಪ್ರೇರಿತವಾಗಿದ್ದು, ಜನಪ್ರಿಯತೆಗಳಿಸುವುದಕ್ಕೆ ಮಾಡಿರುವ ಕೃತ್ಯ ಎಂದು ಸಿಬಿಐ ಹೇಳಿದೆ. 
"ಸೋಹ್ರಾಬುದ್ದೀನ್ ಎನ್ ಕೌಂಟರ್ ಪ್ರಕರಣದಲ್ಲಿ ಅಮಿತ್ ಶಾ ಅವರನ್ನು ಖುಲಾಸೆಗೊಳಿಸಲಾಗಿದ್ದು ಸಿಬಿಐ 2014 ರಲ್ಲಿ ಕೇಂದ್ರದಲ್ಲಿ ಸರ್ಕಾರ ಬದಲಾವಣೆಯಾದಾಗಿನಿಂದ ಅಮಿತ್ ಶಾ ಕುರಿತ ನಿಲುವನ್ನು ಬದಲಾವಣೆ ಮಾಡಿಕೊಂಡಿದೆ" ಎಂದು ಪಿಐಎಲ್ ನಲ್ಲಿ ಆರೋಪಿಸಲಾಗಿತ್ತು. ಆದರೆ ಸಿಬಿಐ ಪರ ವಾದ ಮಂಡಿಸಿರುವ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್, ಅಮಿತ್ ಶಾ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಿರುವ  ವಿಚಾರಣಾ ನ್ಯಾಯಾಲಯದ ಆದೇಶ ಹಾಗೂ ಅದನ್ನು ಎತ್ತಿಹಿಡಿರುವ ಮೇಲ್ಮನವಿ ಸಲ್ಲಿಸಲಾಗಿದ್ದ ನ್ಯಾಯಾಲಯಗಳ ತೀರ್ಪನ್ನು ತನಿಖಾ ಸಂಸ್ಥೆ ಕೂಲಂಕುಶವಾಗಿ ಪರಿಶೀಲಿಸಿದೆ. ಆದ್ದರಿಂದ ಶಾ ಖುಲಾಸೆ ಕುರಿತಾಗಿ ಯಾವ ಮೇಲ್ಮನವಿಯನ್ನೂ ಸಲ್ಲಿಸಿಲ್ಲ ಎಂದು ಸಿಬಿಐ ಪರ ವಕೀಲರು ಹೇಳಿದ್ದಾರೆ.
ನ್ಯಾ. ರಂಜಿತ್ ಮೋರೆ ಹಾಗೂ ಭಾರತಿ ದಂಗ್ರೆ ಅವರಿದ್ದ ವಿಭಾಗೀಯ ಪೀಠ, ಬಾಂಬೆ ಲಾಯರ್ಸ್ ಅಸೋಸಿಯೇಷ ಹಾಗೂ ಸ್ಥಳೀಯ ಪತ್ರಕರ್ತರೊಬ್ಬರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ್ದು, ಆದೇಶವನ್ನು ಕಾಯ್ದೆರಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT