ಸಂಗ್ರಹ ಚಿತ್ರ 
ದೇಶ

ಅಸ್ಸಾಂನಿಂದ ಮಯಾನ್ಮಾರ್ ಗೆ ಏಳು ರೊಹಿಂಗ್ಯಾ ಮುಸ್ಲಿಮರ ಗಡಿಪಾರಿಗೆ ಸುಪ್ರೀಂ ಅನುಮತಿ

ಭಾರತದಲ್ಲಿ ಅಕ್ರಮವಾಗಿ ನೆಲೆಯೂರಿದ್ದ ಏಳು ರೊಹಿಂಗ್ಯಾಗಳನ್ನು ಮತ್ತೆ ಮ್ಯಾನ್ಮಾರ್ ಗೆ ಗಡಿಪಾರು ಮಾಡಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ.

ನವದೆಹಲಿ: ಭಾರತದಲ್ಲಿ ಅಕ್ರಮವಾಗಿ ನೆಲೆಯೂರಿದ್ದ ಏಳು ರೊಹಿಂಗ್ಯಾಗಳನ್ನು ಮತ್ತೆ ಮ್ಯಾನ್ಮಾರ್ ಗೆ ಗಡಿಪಾರು ಮಾಡಲು ಸುಪ್ರೀಂ ಕೋರ್ಟ್ ಗುರುವಾರ ಅನುಮತಿ ನೀಡಿದೆ. ರೊಹಿಂಗ್ಯಾ ಮುಸ್ಲಿಮರ ಅಕ್ರಮ ವಲಸೆ ಕುರಿತು ರಾಜಕೀಯ ವಲಯದಲ್ಲಿ ತಿಕ್ಕಾಟಗಳು ನಡೆಯುತ್ತಿರುವ ಈ ಹೊತ್ತಿನಲ್ಲೇ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.
ಅಸ್ಸಾಂನಲ್ಲಿ ಅಕ್ರಮವಾಗಿ ನೆಲೆಸಿದ್ದ ಏಳು ರೊಹಿಂಗ್ಯಾಗಳನ್ನು ಭಾರತ ಇಂದು ನ್ಯಾಯಾಲಯ ಆದೇಶದಂತೆ ಅವರ ತವರು ಮ್ಯಾನ್ಮಾರ್ ಗೆ ಗಡಿಪಾರು ಮಾಡಲಿದೆ. ವಿಶೇಷವೆಂದರೆ ಹೀಗೆ ಭಾರತದಿಂದ ರೊಹಿಂಗ್ಯಾಗಲನ್ನು ಗಡೀಪಾರು ಮಾಡುತ್ತಿರುವ ಪ್ರಕರಣ ಇದೇ ಮೊದಲಿನದಾಗಿದೆ. 
ಭಾರತಕ್ಕೆ ಅಕ್ರಮವಾಗಿ ವಲಸೆ ಬಂದಿದ್ದ ಏಳು ಮಂದಿ ರೊಹಿಂಗ್ಯಾಗಳನ್ನು 2012ರಲ್ಲಿ  ಸ್ಥಳೀಯ ಪೊಲೀಸರು ಬಂಧಿಸಿದ್ದರು.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ನ್ಯಾಯಮೂರ್ತಿಗಳಾದ ಎಸ್. ಕೆ. ಕೌಲ್ ಮತ್ತು ಕೆ ಎಂ ಜೋಸೆಫ್ ಅವರನ್ನೊಳಗೊಂಡ ಪೀಠವು ಇಂದು ರೊಹಿಂಗ್ಯಾಗಳ ಗಡೀಪಾರು ಆದೇಸವನ್ನು ನೀಡಿದೆ.
ಅಸ್ಸಾಂನ ಸಿಲ್ಚಾರ್‌ ಜಿಲ್ಲೆಯ ಕೇಂದ್ರ ಕಾರಾಗೃಹದಲ್ಲಿರುವ ಏಳು ಮಂದಿ ರೊಹಿಂಗ್ಯಾಗಳನ್ನು ಮಣಿಪುರದ ಗಡಿ ಮೂಲಕ ಇಂದು ಮ್ಯಾನ್ಮಾರ್ ಗೆ ಹಸ್ತಾಂತರ ಮಾಡಲಾಗುವುದು.ಎಂದು ಕೇಂದ್ರ ಸರ್ಕಾರ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT