ಚಂದ್ರಬಾಬು ನಾಯ್ಡು 
ದೇಶ

ಪ್ರಧಾನಿ ಅಭ್ಯರ್ಥಿಯೇ ಇಲ್ಲದೇ ಬಿಜೆಪಿಗೆ ಪರ್ಯಾಯ ಮೈತ್ರಿಕೂಟ ರಚನೆಯಾಗಲಿದೆ: ನಾಯ್ಡು

ಪ್ರಧಾನಿ ಅಭ್ಯರ್ಥಿಯೇ ಇಲ್ಲದೇ ಬಿಜೆಪಿಗೆ ಪರ್ಯಾಯವಾದ ಒಕ್ಕೂಟ ರಚನೆಯಾಗಲಿದೆ ಎಂದು ಚಂದ್ರಬಾಬು ನಾಯ್ಡು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಮರಾವತಿ: 2019 ರ ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿಗೆ ಪರ್ಯಾಯವಾಗಬಲ್ಲ ರಾಜಕೀಯ ಪಕ್ಷಗಳ ಬಗ್ಗೆ ಹೆಚ್ಚು ಚರ್ಚೆ ನಡೆಯುತ್ತಿದೆ. ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಪ್ರಾದೇಶಿಕ ಪಕ್ಷಗಳ ನಾಯಕರು ಬಿಜೆಪಿಗೆ ಪರ್ಯಾಯವಾಗಿ ವಿಪಕ್ಷಗಳ ಮೈತ್ರಿ ರಚನೆಗೆ ಕಸರತ್ತು ಮಾಡುತ್ತಿದ್ದಾರೆ. ಆದರೆ ಪ್ರಧಾನಿ ಅಭ್ಯರ್ಥಿಯಾರಾಗುತ್ತಾರೆ ಎಂಬುದು ಮಾತ್ರ ಯಾರಿಗೂ ಗೊತ್ತಿಲ್ಲ. 
ಈ ಬಗ್ಗೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸಹ ಮಾತನಾಡಿದ್ದು, ಪ್ರಧಾನಿ ಅಭ್ಯರ್ಥಿಯೇ ಇಲ್ಲದೇ ಬಿಜೆಪಿಗೆ ಪರ್ಯಾಯವಾದ ಒಕ್ಕೂಟ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನ ಮಾನ ನೀಡದೇ ಇದ್ದ ಹಿನ್ನೆಲೆಯಲ್ಲಿ ಎನ್ ಡಿಎ ಮೈತ್ರಿಕೂಟದಿಂದ ಹೊರನಡೆದಿದ್ದ ಚಂದ್ರಬಾಬು ನಾಯ್ಡು, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ನಾನು 40 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ, ಯುಪಿಎ, ಎನ್ ಡಿಎ ಎರಡೂ ಮೈತ್ರಿಕೂಟದೊಂದಿಗೆ ಕೆಲಸ ಮಾಡಿದ್ದೇನೆ ಆದರೆ ಈಗಿನಷ್ಟು ಕೆಟ್ಟ ದಿನಗಳನ್ನು ಕಂಡಿರಲಿಲ್ಲ. ಅಗತ್ಯವಾದರೆ ಬಿಜೆಪಿಗೆ ಪರ್ಯಾಯವಾದ ರಂಗ ರಚಿಸುವಲ್ಲಿ ತಾವು ಪ್ರಮುಖ ಪಾತ್ರ ವಹಿಸಲು ಸಿದ್ಧ ಎಂದು ಹೇಳಿದ್ದಾರೆ. 
ಇದೇ ವೇಳೆ ಪ್ರಧಾನಿ ಅಭ್ಯರ್ಥಿಯಾಗ್ತೀರಾ ಎಂಬ ಪ್ರಶ್ನೆಗೂ ಸ್ಪಷ್ಟನೆ ನೀಡಿರುವ ಚಂದ್ರಬಾಬು ನಾಯ್ಡು, ನಾನು ಕೇಂದ್ರ ಸರ್ಕಾರದ ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ, ರಾಷ್ಟ್ರರಾಜಕಾರಣಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

SCROLL FOR NEXT