ಶೃಂಗಸಭೆ ಹಿನ್ನಲೆಯಲ್ಲಿ ಭಾರತಕ್ಕೆ ಆಗಮಿಸಿರುವ ರಷ್ಯಾ ಅಧ್ಯಕ್ಷ 
ದೇಶ

ಭಾರತ-ರಷ್ಯಾ ಶೃಂಗಸಭೆ ಇಂದು: ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಿವೆ ಉಭಯ ರಾಷ್ಟ್ರಗಳು

ಭಾರತ-ರಷ್ಯಾ ನಡುವಿನ 19ನೇ ವಾರ್ಷಿಕ ಶೃಂಗಸಭೆ ಶುಕ್ರವಾರ ಆರಂಭಗೊಳ್ಳಲಿದ್ದು, ಶೃಂಗಸಭೆಯಲ್ಲಿ ಉಭಯ ರಾಷ್ಟ್ರಗಳು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಗಳಿವೆ...

ನವದೆಹಲಿ: ಭಾರತ-ರಷ್ಯಾ ನಡುವಿನ 19ನೇ ವಾರ್ಷಿಕ ಶೃಂಗಸಭೆ ಶುಕ್ರವಾರ ಆರಂಭಗೊಳ್ಳಲಿದ್ದು, ಶೃಂಗಸಭೆಯಲ್ಲಿ ಉಭಯ ರಾಷ್ಟ್ರಗಳು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಗಳಿವೆ. 
ಶೃಂಗಸಭೆಯಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಗುರುವಾರ ಸಂಜೆ ಭಾರತಕ್ಕೆ ಆಗಮಿಸಿದ್ದು, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಪುಟಿನ್ ಅವರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. 
ಬಳಿಕ ಪುಟಿನ್ ಅವರನ್ನು ತಮ್ಮ ನಿವಾಸದಲ್ಲಿ ಸ್ವಾಗತಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ರಷ್ಯಾ ಅಧ್ಯಕ್ಷರ ಜೊತೆ ಮಾತುಕತೆ ನಡೆದಿರು. 
ಶುಕ್ರವಾರ ಶೃಂಗಸಭೆಯಲ್ಲಿ ಉಭಯ ರಾಷ್ಟ್ರಗಳು ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಿವೆ. ಆ ಪೈಕಿ ಎಸ್-400 ಟ್ರಯಂಫ್ ಕ್ಷಿಪಣಿ ನಿರೋಧಕ ವಾಯು ರಕ್ಷಣಾ ವ್ಯವಸ್ಥೆ ಖರೀದಿ, ಕಮೋವ್ ಕಾಪ್ಟರ್ ಉತ್ಪಾದನೆಗೆ ಒಡಂಬಡಿಕೆ, ಪರಮಾಣು ಇಂಧನ ಚಾಲಿತ ಸಬ್ ಮರೀನ್ ಖರೀದಿ, ಭಾರತದ ಗಗನಯಾನಿಗಳನ್ನು ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ ಕರೆದೊಯ್ಯಲು ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆಗಳಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT