ರಾಹುಲ್ ಗಾಂಧಿ, ಅಖಿಲೇಶ್ ಯಾದವ್ 
ದೇಶ

ಮಧ್ಯ ಪ್ರದೇಶ ಚುನಾವಣೆ:ಕಾಂಗ್ರೆಸ್ ಗಾಗಿ ಕಾಯ್ದುಕೊಂಡಿದ್ದು, ಬಿಎಸ್ಪಿ, ಜಿಜಿಪಿ ಜೊತೆ ಸಮಾಲೋಚನೆ - ಅಖಿಲೇಶ್

ಕಾಂಗ್ರೆಸ್ ಪಕ್ಷಕ್ಕಾಗಿ ಧೀರ್ಘಕಾಲದಿಂದ ಕಾಯುತ್ತಿದ್ದು, ಈಗ ಮಧ್ಯಪ್ರದೇಶ ಚುನಾವಣೆಗಾಗಿ ಬಿಎಸ್ಪಿ ಹಾಗೂ ಗೊಂಡ್ವಾನ ಗಣತಂತ್ರ ಪಕ್ಷದೊಂದಿಗೆ ಸಮಾಲೋಚನೆ ನಡೆಸುವುದಾಗಿ ಸಮಾಜವಾದಿ ಪಕ್ಷ ಹೇಳಿದೆ.

ಲಖನೌ:  ಕಾಂಗ್ರೆಸ್ ಪಕ್ಷಕ್ಕಾಗಿ ಧೀರ್ಘಕಾಲದಿಂದ ಕಾಯುತ್ತಿದ್ದು, ಈಗ ಮಧ್ಯಪ್ರದೇಶ ಚುನಾವಣೆಗಾಗಿ  ಬಿಎಸ್ಪಿ ಹಾಗೂ  ಗೊಂಡ್ವಾನ ಗಣತಂತ್ರ ಪಕ್ಷದೊಂದಿಗೆ ಸಮಾಲೋಚನೆ ನಡೆಸುವುದಾಗಿ ಸಮಾಜವಾದಿ ಪಕ್ಷ  ಹೇಳಿದೆ.

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷ ಹಠಮಾರಿ ಧೋರಣೆ  ಪ್ರದರ್ಶಿಸುತ್ತಿದ್ದು, ನಮ್ಮ ಪಕ್ಷವನ್ನು ಮುಗಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ ಬಿಎಸ್ಪಿ ನಾಯಕಿ ಮಾಯಾವತಿ ಕಾಂಗ್ರೆಸ್ ಜೊತೆಗಿನ ಮೈತ್ರಿಯಿಂದ ಹೊರ ನಡೆದ ನಂತರ ಎಸ್ಪಿ ಹೇಳಿಕೆ ನೀಡಿದೆ.

ಕಾಂಗ್ರೆಸ್ ಪಕ್ಷಕ್ಕಾಗಿ ಧೀರ್ಘ ಕಾಲದಿಂದ ಕಾಯುತ್ತಿದ್ದೇವೆ. ನಾವು ಎಷ್ಟು ಸಮಯ ಕಾಯಬೇಕು. ಈಗ ಮಧ್ಯಪ್ರದೇಶ ಚುನಾವಣೆಗಾಗಿ ಬಿಎಸ್ಪಿ ಹಾಗೂ ಗೊಂಡ್ವಾನ ಗಣತಂತ್ರ ಪಕ್ಷದೊಂದಿಗೆ ಸಮಾಲೋಚಿಸಿ ಮೈತ್ರಿ ಮಾಡಿಕೊಳ್ಳಬೇಕಿದೆ ಎಂದು ಎಸ್ಪಿ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದರು.

ಚಿಕ್ಕ ಪಕ್ಷಗಳು ತಮ್ಮ  ಅಭ್ಯರ್ಥಿಗಳನ್ನು  ಪ್ರಕಟಿಸಲು ವಿಳಂಬ ಮಾಡದಂತೆ ಕಾಂಗ್ರೆಸ್  ಹೃದಯ ವಿಶಾಲತೆ ಪ್ರದರ್ಶಿಸಬೇಕಾಗಿದೆ ಎಂದು ಯಾದವ್ ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT