ಸಂಗ್ರಹ ಚಿತ್ರ 
ದೇಶ

ನಾಯಿಗೆ ಕ್ಷಮೆ ಕೇಳದಕ್ಕೆ ಚೂರಿಯಿಂದ ಆರು ಬಾರಿ ಇರಿದು ಕೊಂದ ನೆರೆಮನೆಯವರು!

ಒಂದೆರೆಡು ನಿಮಿಷದಲ್ಲಿ ಮನೆ ಸೇರಿ ಆಯಾಗಿ ಮಲಗಿ ವಿಶ್ರಾಂತಿ ಪಡೆಯಬೇಕಿದ್ದ ವ್ಯಕ್ತಿಯೊರ್ವ ರಸ್ತೆ ಮಧ್ಯೆ ನಿಂತು ಬೊಗಳುತ್ತಿದ್ದ ನಾಯಿಗೆ ಬೈದಿದ್ದಕ್ಕೆ ನಾಯಿಯ ಮಾಲೀಕರು...

ನವದೆಹಲಿ: ಒಂದೆರೆಡು ನಿಮಿಷದಲ್ಲಿ ಮನೆ ಸೇರಿ ಆಯಾಗಿ ಮಲಗಿ ವಿಶ್ರಾಂತಿ ಪಡೆಯಬೇಕಿದ್ದ ವ್ಯಕ್ತಿಯೊರ್ವ ರಸ್ತೆ ಮಧ್ಯೆ ನಿಂತು ಬೊಗಳುತ್ತಿದ್ದ ನಾಯಿಗೆ ಬೈದಿದ್ದಕ್ಕೆ ನಾಯಿಯ ಮಾಲೀಕರು ಆತನಿಗೆ ಚೂರಿ ಇರಿದು ಕೊಲೆ ಮಾಡಿದ್ದಾರೆ. 
ನವದೆಹಲಿಯಲ್ಲಿ ಈ ಘಟನೆ ನಡೆಸಿದ್ದು ವಿಜೇಂದ್ರ ರಾಣಾ ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ. ವಿಜೇಂದ್ರ ಲಾರಿ ಚಾಲಕನಾಗಿದ್ದು ಮಧ್ಯರಾತ್ರಿ ಮನೆಗೆ ಬರುತ್ತಿದ್ದರು. ಈ ವೇಳೆ ಟಾಮಿ(ನಾಯಿ)ಯೊಂದಿಗೆ ಮೂವರು ಮಧ್ಯರಾತ್ರಿಯಲ್ಲಿ ತಿರುಗಾಡಲು ತೆರಳಿದ್ದಾರೆ. 
ವಿಜೇಂದ್ರ ರಾಣಾ ನಡೆದುಕೊಂಡು ಬರುತ್ತಿದ್ದುದ್ದನ್ನು ಕಂಡ ಟಾಮಿ ಬೊಗಳಲು ಶುರು ಮಾಡಿದೆ. ಈ ವೇಳೆ ರಾಣಾ ನಾಯಿಯನ್ನು ಬೈದು ಬೆದರಿಸಿ ಓಡಿಸಲು ಮುಂದಾಗಿದ್ದಾನೆ. ಈ ವೇಳೆ ಅಲ್ಲೇ ಪಕ್ಕದಲ್ಲಿದ್ದ ಮೂವರು ಬಂದು ನಾಯಿಗೆ ಕ್ಷಮೆ ಕೇಳುವಂತೆ ಬೆದರಿಕೆ ಹಾಕಿದ್ದಾರೆ. ಇದನ್ನು ರಾಣಾ ವಿರೋಧಿಸಿದ್ದರಿಂದ ಮೂವರು ಸೇರಿ ರಾಣಾಗೆ ಚೂರಿಯಿಂದ ಆರು ಬಾರಿ ಇರಿದಿದ್ದಾರೆ. 
ಅಣ್ಣನ ಕೂಗಾಟವನ್ನು ಕೇಳಿ ಹೊರ ಬಂದ ಸಹೋದರ ಆತನ ರಕ್ಷಣೆಗೆ ಮುಂದಾಗಿದ್ದಾನೆ. ಈ ವೇಳೆ ತೀವ್ರವಾಗಿ ಗಾಯಗೊಂಡು ರಕ್ತ ಸ್ರಾವವಾಗಿದ್ದರಿಂದ ರಾಣಾನನ್ನು ಕೂಡಲೇ ದೀನ್ ದಯಾಳ್ ಉಪಾಧ್ಯಾಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT