ಪ್ರತಿಭಟನೆಯಲ್ಲಿ ವಿಜಯ್ ಗೋಯಲ್ 
ದೇಶ

ದೆಹಲಿ: ಎಎಪಿ ಸರ್ಕಾರ ಇಂಧನ ದರ ಇಳಿಸುವಂತೆ ಒತ್ತಾಯ: ಕೇಂದ್ರ ಸಚಿವ ಎತ್ತಿನ ಗಾಡಿ ಏರಿ ಪ್ರತಿಭಟನೆ !

ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 81.82 ಹಾಗೂ ಡೀಸೆಲ್ ಬೆಲೆ 73.53 ರೂ ಆಗಿದ್ದು, ಕೇಂದ್ರ ಸಚಿವ ವಿಜಯ್ ಗೋಯಲ್ ನೇತೃತ್ವದಲ್ಲಿ ಇಂದು ಬಿಜೆಪಿ ವತಿಯಿಂದ ಎತ್ತಿನ ಗಾಡಿ ಏರಿ ಪ್ರತಿಭಟನೆ ನಡೆಸಲಾಯಿತು.

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್  ಬೆಲೆ ಲೀಟರಿಗೆ 81.82 ಹಾಗೂ ಡೀಸೆಲ್ ಬೆಲೆ 73.53 ರೂ ಆಗಿದ್ದು, ಕೇಂದ್ರ ಸಚಿವ ವಿಜಯ್ ಗೋಯಲ್ ನೇತೃತ್ವದಲ್ಲಿ ಇಂದು ಬಿಜೆಪಿ ವತಿಯಿಂದ ಎತ್ತಿನ ಗಾಡಿ ಏರಿ ಪ್ರತಿಭಟನೆ ನಡೆಸಲಾಯಿತು.

ಕೆಂಪು ಕೋಟೆಯಿಂದ ಚಾಂದಿನಿ ಚೌಕ್ ವರೆಗೂ ಎತ್ತಿನ ಗಾಡಿ ಮೆರವಣಿಯಲ್ಲಿ ಸಾಗಿದ ಬಿಜೆಪಿ ಕಾರ್ಯಕರ್ತರು ದೆಹಲಿ ಸರ್ಕಾರ ಇಂಧನ ಬೆಲೆ ಇಳಿಸುವಂತೆ ಒತ್ತಾಯಿಸಿದರು. ಸಚಿವರ ಬೆಂಬಲಿಗರು ಬಿತ್ತಿಪತ್ರಗಳನ್ನು ಪ್ರದರ್ಶಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರಸರ್ಕಾರ ಪ್ರತಿ ಲೀಟರ್  ತೈಲ ಬೆಲೆಯಲ್ಲಿ 2.50 ಪೈಸೆ ಕಡಿತಗೊಳಿಸಿದ್ದು, ನಂತರ ಎಲ್ಲಾ ರಾಜ್ಯಗಳಲ್ಲಿ ಅಬಕಾರಿ ಸುಂಕವನ್ನು ಲೀಟರಿಗೆ 1.5 ರೂಪಾಯಿ ಕಡಿತಗೊಳಿಸುವ ಘೋಷಣೆ ಮಾಡಿವೆ ಆದರೆ, ದೆಹಲಿ ಸರ್ಕಾರ ಇದನ್ನು ಮಾಡಿಲ್ಲ ಎಂದು ಸಚಿವರು  ಆರೋಪಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT