ಯೋಗಿ 
ದೇಶ

ಗುಜರಾತ್ ನಲ್ಲಿ ಉತ್ತರ ಭಾರತೀಯರ ಮೇಲೆ ಹಲ್ಲೆ ನಡೆಯುತ್ತಿಲ್ಲ: ರೂಪಾನಿ ಜೊತೆ ಮಾತನಾಡಿದ ನಂತರ ಯೋಗಿ ಹೇಳಿಕೆ

ಗುಜರಾತ್ ನಲ್ಲಿ ಉತ್ತರ ಭಾರತೀಯರ ಮೇಲೆ ಹಲ್ಲೆ ನಡೆಯುತ್ತಿಲ್ಲ ಎಂದು ಸ್ವತಃ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಲಖನೌ: ಗುಜರಾತ್ ನಲ್ಲಿ ಉತ್ತರ ಭಾರತೀಯರ ಮೇಲೆ ಹಲ್ಲೆ ನಡೆಸಲಾಗುತ್ತಿದೆ ಎಂಬ ಮಾಹಿತಿ ದೇಶಾದ್ಯಂತ ಗಮನಸೆಳೆದಿದ್ದು ಗುಜರಾತ್ ನಲ್ಲಿ ಉತ್ತರ ಭಾರತೀಯರ ಮೇಲೆ ಹಲ್ಲೆ ನಡೆಯುತ್ತಿಲ್ಲ ಎಂದು ಸ್ವತಃ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. 
ಅತ್ಯಾಚಾರ ಪ್ರಕರಣವೊಂದರಲ್ಲಿ ಬಿಹಾರ ಮೂಲದ ವ್ಯಕ್ತಿಯೋರ್ವ ಬಂಧನಕ್ಕೊಳಗಾಗಿದ್ದು, ಈ ಘಟನೆಯ ನಂತರ ಗುಜರಾತ್ ನ ಉತ್ತರ ಭಾಗದಲ್ಲಿ ಉತ್ತರ ಪ್ರದೇಶವೂ ಸೇರಿದಂತೆ ಗುಜರಾತ್ ನಲ್ಲಿ ನೆಲೆಸಿರುವ  ಹಿಂದಿ ಭಾಷಿಕರ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿವೆ, ಪರಿಣಾಮ  20,000 ಕ್ಕೂ ಹೆಚ್ಚು ಜನರು ಗುಜರಾತ್ ನ್ನು  ತೊರೆದಿದ್ದಾರೆ ಎಂಬ ವರದಿಗಳು ಪ್ರಕಟವಾಗಿದ್ದವು. ಘಟನೆ ಬಗ್ಗೆ ಸ್ಪಷ್ಟನೆ ನೀಡಿದ್ದ ಗುಜರಾತ್ ಸರ್ಕಾರ ಕಳೆದ 48 ಗಂಟೆಗಳಿಂದ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಗುಜರಾತ್ ಸರ್ಕಾರ ಸ್ಪಷ್ಟನೆ ನೀಡಿತ್ತು. 
ಹಲ್ಲೆ ಪ್ರಕರಣಗಳ ವರದಿಯ ಬಗ್ಗೆ ಗುಜರಾತ್ ಸಿಎಂ ರೂಪಾನಿ ಅವರೊಂದಿಗೆ ಮಾತನಾಡಿದ್ದೇನೆ, ಕಳೆದ 3 ದಿನಗಳಿಂದ ಅಂತಹ ಯಾವುದೇ ಘಟನೆಗಳು ನಡೆದಿಲ್ಲ ಗುಜರಾತ್ ಸಿಎಂ ಹೇಳಿದ್ದಾರೆಂದು ಆದಿತ್ಯನಾಥ್ ತಿಳಿಸಿದ್ದಾರೆ.  ಗುಜರಾತ್ ಶಾಂತಿಯನ್ನು ಬಯಸುವ ರಾಜ್ಯ, ಅಭಿವೃದ್ಧಿಗೆ ಮಾದರಿ, ಯಾವುದೇ ವಿಷಯ ಸಿಗದೇ ಇದ್ದಾಗ ಕೆಲವರು ಈ ರೀತಿಯ ವದಂತಿಗಳನ್ನು ಹಬ್ಬಿಸುತ್ತಾರೆ. ಅಭಿವೃದ್ಧಿ ಬೇಕಿಲ್ಲದವರು ಈ ರೀತಿಯ ವದಂತಿಗಳನ್ನು ಹಬ್ಬಿಸುತ್ತಾರೆ ಎಂದು ಆದಿತ್ಯನಾಥ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT