ಸಿಎಂ ಪಿಣರಾಯಿ ವಿಜಯನ್ 
ದೇಶ

ಶಬರಿಮಲೆ ತೀರ್ಪಿನ ವಿರುದ್ಧದ ಪ್ರತಿಭಟನೆ ಕೇರಳದ ಒಗ್ಗಟ್ಟು ಮುರಿಯುವ ಯತ್ನ: ಸಿಎಂ ಪಿಣರಾಯಿ ವಿಜಯನ್

ಶಬರಿಮಲೆ ತೀರ್ಪಿನ ವಿರುದ್ಧದ ಪ್ರತಿಭಟನೆ ಕೇರಳದ ಒಗ್ಗಟ್ಟು ಮುರಿಯುವ ಯತ್ನ ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಶಬರಿಮಲೆ ತೀರ್ಪಿನ ವಿರುದ್ಧದ ಪ್ರತಿಭಟನೆ ಕೇರಳದ ಒಗ್ಗಟ್ಟು ಮುರಿಯುವ ಯತ್ನ ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. 
ಸುಪ್ರೀಂ ಕೋರ್ಟ್ ತೀರ್ಪನ್ನು ಜಾರಿಗೆ ತರಲು ತಮ್ಮ ಸರ್ಕಾರ ನಿರ್ಧರಿಸಿರುವುದನ್ನು ಪ್ರತಿಭಟಿಸುತ್ತಿರುವುದು ಕೇರಳದ ಜಾತ್ಯತೀತ ಗುರುತಿಗೆ ಧಕ್ಕೆ ಉಂಟುಮಾಡುವ ಪ್ರಯತ್ನವಾಗಿದೆ ಎಂದು  ಪಿಣರಾಯಿ ವಿಜಯನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ವಿವಿಧ ಧಾರ್ಮಿಕ ಪ್ರದೇಶಗಳು ಹಾಗೂ ಧಾರ್ಮಿಕ ನಂಬಿಕೆಗಳನ್ನು ಕಪಾಡುವುದಕ್ಕೆ ಕೇರಳ ಸರ್ಕಾರ ಎಂದಿಗೂ ಬದ್ಧವಾಗಿದೆ. ರಾಜಕೀಯ ಉದ್ದೇಶಗಳಿಂದ ರಾಜ್ಯದಲ್ಲಿ ಉದ್ವಿಗ್ನತೆ ಉಂಟು ಮಾಡುವ ಪ್ರಯತ್ನಗಳಿಗೆ ಜಗ್ಗುವುದಿಲ್ಲ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ. 
ಕೇರಳ ರಾಜ್ಯದ ಜನತೆ ಇತ್ತೀಚಿನ ದಿನಗಳಲ್ಲಿ ಜಲಪ್ರವಾಹವನ್ನು ಎದುರಿಸಿ ಸಂಕಷ್ಟದ ದಿನಗಳನ್ನು ಕಂಡಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರದ ನಡೆ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳುವುದು ರಾಜ್ಯದ ಒಗ್ಗಟ್ಟು ಮುರಿಯುವ ಯತ್ನವಾಗಿದೆ.  ಒಂದು ವೇಳೆ ಸರ್ಕಾರದ ನಡೆಯನ್ನು ಯಾರಾದರೂ ಅಪಾರ್ಥ ಮಾಡಿಕೊಂಡಿದ್ದರೆ ಅವರೊಂದಿಗೆ ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ