ಸಿಎಂ ಪಿಣರಾಯಿ ವಿಜಯನ್ 
ದೇಶ

ಶಬರಿಮಲೆ ತೀರ್ಪಿನ ವಿರುದ್ಧದ ಪ್ರತಿಭಟನೆ ಕೇರಳದ ಒಗ್ಗಟ್ಟು ಮುರಿಯುವ ಯತ್ನ: ಸಿಎಂ ಪಿಣರಾಯಿ ವಿಜಯನ್

ಶಬರಿಮಲೆ ತೀರ್ಪಿನ ವಿರುದ್ಧದ ಪ್ರತಿಭಟನೆ ಕೇರಳದ ಒಗ್ಗಟ್ಟು ಮುರಿಯುವ ಯತ್ನ ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಶಬರಿಮಲೆ ತೀರ್ಪಿನ ವಿರುದ್ಧದ ಪ್ರತಿಭಟನೆ ಕೇರಳದ ಒಗ್ಗಟ್ಟು ಮುರಿಯುವ ಯತ್ನ ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. 
ಸುಪ್ರೀಂ ಕೋರ್ಟ್ ತೀರ್ಪನ್ನು ಜಾರಿಗೆ ತರಲು ತಮ್ಮ ಸರ್ಕಾರ ನಿರ್ಧರಿಸಿರುವುದನ್ನು ಪ್ರತಿಭಟಿಸುತ್ತಿರುವುದು ಕೇರಳದ ಜಾತ್ಯತೀತ ಗುರುತಿಗೆ ಧಕ್ಕೆ ಉಂಟುಮಾಡುವ ಪ್ರಯತ್ನವಾಗಿದೆ ಎಂದು  ಪಿಣರಾಯಿ ವಿಜಯನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  ವಿವಿಧ ಧಾರ್ಮಿಕ ಪ್ರದೇಶಗಳು ಹಾಗೂ ಧಾರ್ಮಿಕ ನಂಬಿಕೆಗಳನ್ನು ಕಪಾಡುವುದಕ್ಕೆ ಕೇರಳ ಸರ್ಕಾರ ಎಂದಿಗೂ ಬದ್ಧವಾಗಿದೆ. ರಾಜಕೀಯ ಉದ್ದೇಶಗಳಿಂದ ರಾಜ್ಯದಲ್ಲಿ ಉದ್ವಿಗ್ನತೆ ಉಂಟು ಮಾಡುವ ಪ್ರಯತ್ನಗಳಿಗೆ ಜಗ್ಗುವುದಿಲ್ಲ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ. 
ಕೇರಳ ರಾಜ್ಯದ ಜನತೆ ಇತ್ತೀಚಿನ ದಿನಗಳಲ್ಲಿ ಜಲಪ್ರವಾಹವನ್ನು ಎದುರಿಸಿ ಸಂಕಷ್ಟದ ದಿನಗಳನ್ನು ಕಂಡಿದ್ದಾರೆ. ಈ ಸಂದರ್ಭದಲ್ಲಿ ಸರ್ಕಾರದ ನಡೆ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳುವುದು ರಾಜ್ಯದ ಒಗ್ಗಟ್ಟು ಮುರಿಯುವ ಯತ್ನವಾಗಿದೆ.  ಒಂದು ವೇಳೆ ಸರ್ಕಾರದ ನಡೆಯನ್ನು ಯಾರಾದರೂ ಅಪಾರ್ಥ ಮಾಡಿಕೊಂಡಿದ್ದರೆ ಅವರೊಂದಿಗೆ ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT