ನಕ್ಕೀರನ್ ಗೋಪಾಲ್ 
ದೇಶ

ನಕ್ಕೀರನ್ ಗೋಪಾಲ್ ಗೆ ಜೈಲು ಶಿಕ್ಷೆ ಇಲ್ಲ

ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿಸಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ಹಿರಿಯ ಪತ್ರಕರ್ತ ಹಾಗೂ ನಕ್ಕೀರನ್.....

ಚೆನ್ನೈ: ತಮಿಳುನಾಡು ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ವಿರುದ್ಧ ಅವಹೇಳನಕಾರಿ ಬರಹ ಪ್ರಕಟಿಸಿದ್ದಕ್ಕಾಗಿ ಬಂಧನಕ್ಕೊಳಗಾಗಿದ್ದ ಹಿರಿಯ ಪತ್ರಕರ್ತ ಹಾಗೂ ನಕ್ಕೀರನ್ ಪತ್ರಿಕೆ ಪ್ರಕಾಶಕ ನಕ್ಕೀರನ್ ಗೋಪಾಲ್ ಅವರಿಗೀಗ ಬಿಡುಗಡೆ ಸಿಕ್ಕಿದೆ. ಗೋಪಾಲ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಲಪಡಿಸಲು ತಮಿಳುನಾಡು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನಿರಾಕರಿಸಿದೆ.
ಪುಣೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ತಮಿಳು ವಾರಪತ್ರಿಕೆಯ ಸಂಪಾದಕ ಗೋಪಾಲ್ ಅವರನ್ನು ಚೆನ್ನೈ ಪೋಲೀಸರು ಮಂಗಳವಾರ ಬಂಧಿಸಿದ್ದರು.ಚೆನ್ನೈ ವಿಮಾನ ನಿಲ್ದಾಣದಲ್ಲಿ ಅವರ ಬಂಧನವಾಗಿತ್ತು.
ಹಿರಿಯ ಪತ್ರಕರ್ತ ಆರ್.ಗೋಪಾಲ್ ಅವರು ನಕ್ಕೀರನ್ ಪತ್ರಿಕೆಯ ಮುಖ್ಯಸ್ಥರಾಗಿದ್ದು ರಾಜ ಭವನ ದೂರು ನೀಡಿದ್ದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿತ್ತು. ರಾಜ್ಯಪಾಲ ಪುರೋಹಿತ್ ಜೊತೆಗೆ ಅರುಪ್ಪು ಕೊಟ್ಟಾಯಿ ಕಾಲೇಜಿನ ಸಹಾಯಕ ಪ್ರಾದ್ಯಾಪಕಿಯಾಗಿರುವ ನಿರ್ಮಲಾ ದೇವಿಯವರನ್ನು ಮಧುರೈ ರಾಮರಾಜ ವಿವಿ ಸೆಕ್ಸ್ ಹಗರಣದಲ್ಲಿ ಆರೋಪಿ ಎಂಬಂತೆ ಲೇಖನದಲ್ಲಿ ಬಿಂಬಿಸಲಾಗಿತ್ತು.
ನಿರ್ಮಲಾ ತಾವು ಇದಾಗಲೇ ಪೋಲೀಸ್ ವಶದಲ್ಲಿದ್ದು ಅವರು ತಮ ವಿರುದ್ಧದ ಆರೋಪಗಳನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT