ದೇಶ

ಬಿಜೆಪಿ ಒಗ್ಗೂಡಿಸುತ್ತೆ, ಕಾಂಗ್ರೆಸ್ ಒಡೆಯುತ್ತೆ: ಮೋದಿ

ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಸಮಾರಂಭಗಳಲ್ಲಿ ಭಾಗವಹಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಒಂದು ಕುಟುಂಬಕ್ಕಾಗಿ ಕಾಂಗ್ರೆಸ್ ದೇಶವನ್ನೇ

ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಸಮಾರಂಭಗಳಲ್ಲಿ ಭಾಗವಹಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಒಂದು ಕುಟುಂಬಕ್ಕಾಗಿ ಕಾಂಗ್ರೆಸ್ ದೇಶವನ್ನೇ ಒಡೆಯುತ್ತಿದೆ ಎಂದು ಆರೋಪಿಸಿದ್ದಾರೆ. 
ಬಿಜೆಪಿ ಸಂತೋಷ ಹಂಚುವುದರಲ್ಲಿ ಹಾಗೂ ಜನರನ್ನು ಒಗ್ಗೂಡಿಸುವ ತತ್ವದಲ್ಲಿ ನಂಬಿಕೆ ಇಟ್ಟಿದ್ದರೆ ಕಾಂಗ್ರೆಸ್ ಪಕ್ಷ ಒಂದು ಕುಟುಂಬಕ್ಕಾಗಿ ದೇಶವನ್ನೇ ಒಡೆಯುತ್ತಿದೆ ಎಂದು ಮೋದಿ ಹೇಳಿದ್ದಾರೆ. ಅ.10 ರಂದು 5 ಲೋಕಸಭಾ ಕ್ಷೇತ್ರಗಳ  ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಗುಜರಾತ್ ನಲ್ಲಿ ವಲಸಿಗರಾಗಿರುವ ಉತ್ತರ ಭಾರತದ ನೌಕರರು ಹಲ್ಲೆ ಭಯದಿಂದ ವಾಪಸ್ ತೆರಳುತ್ತಿದ್ದಾರೆ ಎಂಬ ವದಂತಿಗಳನ್ನೂ ಉಲ್ಲೇಖಿಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ದೇಶವನ್ನು ಒಡೆಯುತ್ತಿದೆ ಎಂದು ಆರೋಪಿಸಿದ್ದಾರೆ.
ನಾವು ಚುನಾವಣೆಗಳನ್ನು ಗೆಲ್ಲುತ್ತಿರುವುದು ಮತ್ತೊಬ್ಬರನ್ನು ಮಣಿಸುವ ಅಹಂಕಾರಕ್ಕಾಗಿ ಅಲ್ಲ, ಬದಲಾಗಿ ಜನರ ಸೇವೆ ಮಾಡುವುದಕ್ಕಾಗಿ ಎಂದು ಮೋದಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT