ಒಡಿಶಾ, ಆಂಧ್ರ ಪ್ರದೇಶಕ್ಕೆ 'ತಿತ್ಲಿ' ಚಂಡಮಾರುತ ಭೀತಿ: ರೆಡ್ ಅಲರ್ಟ್ ಘೋಷಣೆ 
ದೇಶ

ಒಡಿಶಾ, ಆಂಧ್ರ ಪ್ರದೇಶಕ್ಕೆ 'ತಿತ್ಲಿ' ಚಂಡಮಾರುತ ಭೀತಿ: ರೆಡ್ ಅಲರ್ಟ್ ಘೋಷಣೆ

ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತವಾಗಿ ಒಡಿಶಾ, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಭುವನೇಶ್ವರ್: ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತವಾಗಿ ಒಡಿಶಾ, ಆಂಧ್ರ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಚಂಡಮಾರುತ 'ತಿತ್ಲಿ'ಯ ಪರಿಣಾಮ ತೀವ್ರ ಸ್ವರೂಪದ್ದಾಗಿರುವ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಒಡಿಶಾದ ಗೋಪಾಲ್ಪುರ ಹಾಗೂ ಆಂಧ್ರ ಪ್ರದೇಶದ ಕಳಿಂಗಪಟ್ಟಣಂ ನಡುವೆ ಗುರುವಾರ ಬೆಳಿಗ್ಗೆ 145 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಸಲಾಗಿದೆ."ತಿತ್ಲಿ ಗಂಟೆಗೆ 10 ಕಿ.ಮೀ. ವೇಗದಲ್ಲಿ ಬೀಸಲಿದ್ದು ಚಂಡಮಾರುತ ಪ್ರಭಾವವು ಒಡಿಶಾದ ಗೋಪಾಲ್ಪುರದಿಂದ  370 ಕಿಮೀ  ಆಗ್ನೇಯಕ್ಕೆ ಹೆಚ್ಚಾಗಿರಲಿದೆ ಎಂದು ಐಎಂಡಿ ಬುಲೆಟಿನ್ ನಲ್ಲಿ ಹೇಳಿದೆ. ಗೋಪಾಲ್ಪುರ ಹಾಗೂ ಕಳಿಂಗಪಟ್ಟಣಂ ನಡುವೆ ಭೂಕುಸಿತವಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಮುಂದಿನ 18 ಗಂಟೆಗಳಲ್ಲಿ ತೀವ್ರತರವಾದ ಚಂಡಮಾರುತದ ಹಾವಳಿ ಎದುರಾಗಲಿದೆ ಎಂದು ಅದು ಎಚ್ಚರಿಸಿದೆ.
ಒಡಿಶಾ ಶಾಲೆಗಳಿಗೆ ರಜೆ
ಚಂಡಮಾರುತದ ಮುನ್ಸೂಚನೆ ಕಾರಣದಿಂದ ಒಡಿಶಾದ ನಾಲ್ಕು ಜಿಲ್ಲೆಗಳಾದ ಗುಂಜಮ್ ಗಜಪತಿ, ಪುರಿ, ಜಗತ್ ಸಿಂಗ್ ಪುರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೊಷಣೆ ಂಆಡಲಾಗಿದೆ.ಅಲ್ಲದೆ ಜಿಲ್ಲಾಧಿಕಾರಿಗಳು ಚಂಡಮಾರುತ ಹಾನಿಗೊಳಗಾದಲ್ಲಿ ತುರ್ತು ಪರಿಹಾರ ಕ್ರಮ ಕೈಗೊಳ್ಳಲು ಸೂಚನೆ ರವಾನಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT