ರಾಯ್'ಬರೇಲಿ ರೈಲು ದುರಂತ 
ದೇಶ

ರಾಯ್'ಬರೇಲಿ ರೈಲು ದುರಂತ: ಮೃತರ ಕುಟುಂಬಕ್ಕೆ ರೂ.5 ಪರಿಹಾರ, ತನಿಖೆಗೆ ಆದೇಶಿಸಿದ ಸರ್ಕಾರ

ಉತ್ತರಪ್ರದೇಶದ ರಾಯ್'ಬರೇಲಿಯಲ್ಲಿ ಸಂಭವಿಸಿದ ರೈಲು ದುರಂತ ಪ್ರಕರಣದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡುವುದಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಘೋಷಣೆ ಮಾಡಿದ್ದಾರೆ...

ರಾಯ್'ಬರೇಲಿ: ಉತ್ತರಪ್ರದೇಶದ ರಾಯ್'ಬರೇಲಿಯಲ್ಲಿ ಸಂಭವಿಸಿದ ರೈಲು ದುರಂತ ಪ್ರಕರಣದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ತಲಾ ರೂ.5 ಲಕ್ಷ ಪರಿಹಾರ ನೀಡುವುದಾಗಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಘೋಷಣೆ ಮಾಡಿದ್ದಾರೆ. 
ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ 5 ಲಕ್ಷ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ರೂ.1 ಲಕ್ಷ, ಸಣ್ಣಪುಟ್ಟ ಗಾಯಗೊಂಡವರಿಗೆ ರೂ.50 ಸಾವಿರ ಪರಿಹಾರ ನೀಡುವುದಾಗಿ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರು ಹೇಳಿದ್ದಾರೆ . 
ಅಲ್ಲದೆ, ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಗೋಯಲ್ ಅವರು ಪ್ರಕಱಣವನ್ನು ತನಿಖೆಗೆ ಆದೇಶಿಸಿದ್ದು, ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆಯನ್ನು ಒದಗಿಸುವಂತೆ ರೈಲ್ವೇ ಸುರಕ್ಷತಾ ಆಯೋಗಕ್ಕೆ ಸೂಚಿಸಿದ್ದಾರೆ. 
ಪ್ರಧಾನಿ ಮೋದಿ ಸಂತಾಪ
ಈ ನಡುವೆ ಘಟನೆ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಸಂತಾಪ ಸೂಚಿಸಿದ್ದಾರೆ. 
ರಾಯ್'ಬರೇಲಿ ಸಂಭವಿಸಿದ ರೈಲು ಅಪಘಾತದಿಂದ ಬಹಳ ನೋವಾಗಿದೆ. ಕುಟುಂಬ ಸದಸ್ಯರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ. ಘಟನಾ ಸ್ಥಳದಲ್ಲಿ ಉತ್ತರಪ್ರದೇಶ ಸರ್ಕಾರ, ರೈಲ್ವೇ ಅಧಿಕಾರಿಗಳು ಹಾಗೂ ಎನ್'ಡಿಆರ್'ಎಪ್ ಪಡೆಗಳು ಸೂಕ್ತ ಪರಿಹಾರ ಕಾರ್ಯಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT