ಸ್ವ ಘೋಷಿತ ದೇವ ಮಾನವ ರಾಂಪಾಲ್ 
ದೇಶ

ಎರಡು ಕೊಲೆ ಪ್ರಕರಣಗಳಲ್ಲಿ ಸ್ವಯಂ ಘೋಷಿತ ದೇವಮಾನವ ರಾಂಪಾಲ್ ಅಪರಾಧಿ: ಹರ್ಯಾಣ ಕೋರ್ಟ್ ತೀರ್ಪು

ಸ್ವಯಂ ಘೋಷಿತ ದೇವಮಾನವ ರಾಂಪಾಲ್ ನನ್ನು ಎರಡು ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿ ...

ಹಿಸಾರ್(ಹರ್ಯಾಣ): ಸ್ವಯಂ ಘೋಷಿತ ದೇವಮಾನವ ರಾಂಪಾಲ್ ನನ್ನು ಎರಡು ಹತ್ಯೆ ಪ್ರಕರಣಗಳಿಗೆ ಸಂಬಂಧಿಸಿ ಹರ್ಯಾಣದ ಹಿಸಾರ್ ನ ನ್ಯಾಯಾಲಯ ಅಪರಾಧಿ ಎಂದು ಸಾಬೀತುಪಡಿಸಿದೆ. ಶಿಕ್ಷೆಯ ಪ್ರಮಾಣ ಇದೇ ತಿಂಗಳು 16 ಅಥವಾ 17ರಂದು ಪ್ರಕಟವಾಗುವ ನಿರೀಕ್ಷೆಯಿದೆ.

ಅಪಾರ ಅನುಯಾಯಿಗಳನ್ನು ಹೊಂದಿರುವ ರಾಂಪಾಲ್ ನನ್ನು ಹಿಸಾರ್ ನ ಕೇಂದ್ರ ಕಾರಾಗೃಹ-2ರಲ್ಲಿರಿಸಲಾಗಿದೆ.

2015ರಲ್ಲಿ ಪೊಲೀಸರು ಮತ್ತು ರಾಂಪಾಲ್ ನ ಭಕ್ತರ ನಡುವೆ ತೀವ್ರ ವಾದ-ವಿವಾದಗಳು ನಡೆದ ನಂತರ ಕೊನೆಗೂ ರಾಂಪಾಲ್ ನನ್ನು ಬಂಧಿಸಲಾಗಿತ್ತು. ಬಾರ್ವಾಲದಲ್ಲಿರುವ ರಾಂಪಾಲ್ ನ ಸತ್ಲೋಕ್ ಆಶ್ರಮದ ಹೊರಗೆ ನಾಲ್ವರು ಮಹಿಳೆಯರು ಮತ್ತು ಇಬ್ಬರು ಮಕ್ಕಳ ಶವ ಪತ್ತೆಯಾದ ಹಿನ್ನಲೆಯಲ್ಲಿ ರಾಂಪಾಲ್ ನನ್ನು ಬಂಧಿಸಲಾಗಿತ್ತು. ಮತ್ತೊಂದು ಬಾರಿ ಆಶ್ರಮದಲ್ಲಿ  ಮತ್ತೊಬ್ಬ ಮಹಿಳೆಯ ಶವ ಸಿಕ್ಕಿದ ಹಿನ್ನಲೆಯಲ್ಲಿ ರಾಂಪಾಲ್ ವಿರುದ್ಧ ಮತ್ತೊಂದು ಕೇಸು ದಾಖಲಾಗಿತ್ತು.

ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆ ವೇಳೆ ಸುಮಾರು 80 ಸಾಕ್ಷಿಗಳ ಹೇಳಿಕೆಯನ್ನು ಪಡೆಯಲಾಗಿದೆ ಎಂದು ಮಾಧ್ಯಮಗಳಲ್ಲಿ ಬಂದಿದೆ ಎಂದು ರಾಂಪಾಲ್ ಪರ ವಕೀಲ ಎಂಎಸ್ ನಾಯನ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT