ತಿತ್ಲಿ ಚಂಡಮಾರುತ ಪರಿಣಾಮ ವಿಶಾಖಪಟ್ಟಣ್ಣಂ ಬಳಿಯ ಸಮುದ್ರದಲ್ಲಿನ ಭಾರೀ ಅಲೆಗಳು 
ದೇಶ

ಒಡಿಶಾ: ಗೋಪಾಲ್ಪುರದಲ್ಲಿ ತೀವ್ರತರ 'ತಿತ್ಲಿ' ಚಂಡಮಾರುತದಿಂದ ಭೂಕುಸಿತ !

ಒಡಿಶಾದ ಗಂಜಾಂ ಜಿಲ್ಲೆಯ ಗೋಪಾಲ್ಪುರದಲ್ಲಿ ಇಂದು ಮುಂಜಾನೆಯಿಂದ ತೀವ್ರ ತರವಾದ ಗಂಟೆಗೆ 126 ಕಿಲೋ ಮೀಟರ್ ವೇಗದಲ್ಲಿ ಬೀಸುತ್ತಿರುವ ಚಂಡಮಾರುತದಿಂದಾಗಿ ಅನೇಕ ಕಡೆಗಳಲ್ಲಿ ಭೂ ಕುಸಿತ ಉಂಟಾಗಿದೆ.

ಭುವನೇಶ್ವರ್: ಒಡಿಶಾದ ಗಂಜಾಂ ಜಿಲ್ಲೆಯ ಗೋಪಾಲ್ಪುರದಲ್ಲಿ ಇಂದು ಮುಂಜಾನೆಯಿಂದ ತೀವ್ರ ತರವಾದ ಗಂಟೆಗೆ 126 ಕಿಲೋ ಮೀಟರ್ ವೇಗದಲ್ಲಿ ಬೀಸುತ್ತಿರುವ  ಚಂಡಮಾರುತದಿಂದಾಗಿ  ಅನೇಕ ಕಡೆಗಳಲ್ಲಿ ಭೂ ಕುಸಿತ ಉಂಟಾಗಿದೆ.

ತಿತ್ಲಿ ಚಂಡಮಾರುತ  ಇನ್ನೂ ಒಂದು ಅಥವಾ ಎರಡು ಗಂಟೆಗಳಲ್ಲಿ  ಸಂಪೂರ್ಣ ಒಡಿಶಾ ಕರಾವಳಿಯನ್ನು ಆವರಿಸಲಿದ್ದು,  ಭೂ ಕುಸಿತ ಪ್ರಕ್ರಿಯೆ ಆರಂಭವಾಗಿದೆ ಎಂದು  ಭುವನೇಶ್ವರದ ಹವಾಮಾನ ಇಲಾಖೆ ನಿರ್ದೇಶಕ ಹೆಚ್. ಆರ್. ಬಿಸ್ವಾಸ್ ಹೇಳಿದ್ದಾರೆ.

ಚಂಡಮಾರುತದಿಂದ ಹಲವೆಡೆ ಅಪಾರ ಪ್ರಮಾಣದ ಭೂಮಿ ಹಾನಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ  ಇಲಾಖೆ ತಿಳಿಸಿದೆ.

 ಈ ಮಧ್ಯೆ ಗೋಪಾಲ್ಪುರದಲ್ಲಿ ಗಂಟೆಗೆ 126 ಕಿ. ಮೀ. ಆಂಧ್ರಪ್ರದೇಶದ ಕಾಳಿಂಗಪಟ್ಟಣ್ಣಂನಲ್ಲಿ ಗಂಟೆಗೆ 56 ಕಿಲೋ ಮೀಟರ್ ವೇಗದಲ್ಲಿ ಗಾಳಿ  ಬೀಸುತ್ತಿರುವ ಬಗ್ಗೆ ವರದಿಯಾಗಿದೆ.

ತಿತ್ಲಿ ಚಂಡಮಾರುತದ ಪರಿಣಾಮ  ಗಂಜಾಂ, ಗಜಪತಿ, ಪೂರಿ, ಕುರ್ದಾ, ಜಗತ್ ಸಿಂಗ್ ಪುರ್ ಮೊದಲಾದ  ಐದು ಜಿಲ್ಲೆಗಳಲ್ಲಿ ಬೀರುಗಾಳಿ ಸಹಿತ ಮಹಿಳೆಯಾಗುತ್ತಿದ್ದು, ಭೂ ಕುಸಿತ ಪ್ರಕ್ರಿಯೆ ಆರಂಭವಾಗಿದೆ .

ವಿಖಾಖಪಟ್ಟಣಂ,ಗೋಪಾಲ್ಪುರ, ಪ್ಯಾರಾದೀಪ್ ಗಳಲ್ಲಿ  ರಾಡರ್ ಗಳ ಮೂಲಕ ಹವಾಮಾನ ವೈಫರೀತ್ಯದ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಬಿಸ್ವಾಸ್ ಹೇಳಿದ್ದಾರೆ. ಮುಂದಿನ ಆರು ಗಂಟೆಗಳ ಅವಧಿಯಲ್ಲಿ ತಿತ್ಲಿ ಚಂಡಮಾರುತ  ಗಂಟೆಗೆ 19 ಕಿಲೋ ಮೀಟರ್ ವೇಗದಲ್ಲಿ ಬಂಗಾಳ ಕೊಲ್ಲಿ ಪ್ರವೇಶಿಸುವ ಸಾಧ್ಯತೆ ಇದೆ.

ತೀವ್ರ ತರ ಚಂಡಮಾರುತದಿಂದಾಗಿ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿ ಬಿದಿದ್ದು, ಕೆಲ ಮನೆಗಳಿಗೆ ಹಾನಿಯಾಗಿದೆ. ಗೋಪಾಲ್ಪುರ , ಮೊದಲಾದ ಕಡೆಗಳಲ್ಲಿ ರಸ್ತೆ ಸಂಪರ್ಕ  ಅಸ್ತವ್ಯಸ್ತಗೊಂಡಿದೆ.

ಈ ಮಧ್ಯೆ  ಒಡಿಶಾ ಸರ್ಕಾರ ಪರಿಸ್ಥಿತಿಯನ್ನು ನಿಯಂತ್ರಿಸಲು ಮುಂದಾಗಿದೆ. ಐದು ಜಿಲ್ಲೆಗಳಲ್ಲಿ ಭೂ ಕುಸಿತದ ಮುನ್ಸೂಚನೆಯಿಂದಾಗಿ ತಗ್ಗುಪ್ರದೇಶದಲ್ಲಿ ವಾಸಿಸುತ್ತಿದ್ದ ಸುಮಾರು 3 ಲಕ್ಷ ಜನರನ್ನು ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT