ಪ್ರೊ.ಜಿ.ಡಿ ಅಗರ್ವಾಲ್ 
ದೇಶ

ಗಂಗಾ ನದಿಗಾಗಿ ಜೂ.22 ರಿಂದ ಉಪವಾಸವಿದ್ದ 87 ವರ್ಷದ ಜಿಡಿ ಅಗರ್ವಾಲ್ ನಿಧನ!

ಗಂಗಾ ನದಿ ರಕ್ಷಣೆಗಾಗಿ ಜೂ.22 ರಿಂದ ಉಪವಾಸವಿದ್ದ ಐಐಟಿ ಪದವೀಧರ, ಪ್ರೊಫೆಸರ್, ಸ್ವಾಮಿ ಜ್ಞಾನ್ ಸ್ವರೂಪ್ ಸನಂದ್ (ಪ್ರೊ ಜಿಡಿ ಅಗರ್ವಾಲ್) ಅ.11 ರಂದು ಇಹಲೋಕ ತ್ಯಜಿಸಿದ್ದಾರೆ.

ರಿಷೀಕೇಶ: ಗಂಗಾ ನದಿ ರಕ್ಷಣೆಗಾಗಿ ಜೂ.22 ರಿಂದ  ಉಪವಾಸವಿದ್ದ ಐಐಟಿ ಪದವೀಧರ, ಪ್ರೊಫೆಸರ್, ಸ್ವಾಮಿ ಜ್ಞಾನ್ ಸ್ವರೂಪ್ ಸನಂದ್ (ಪ್ರೊ ಜಿಡಿ ಅಗರ್ವಾಲ್)  ಅ.11 ರಂದು ಇಹಲೋಕ ತ್ಯಜಿಸಿದ್ದಾರೆ. 
ರಿಷೀಕೇಶದ ಏಮ್ಸ್ ಆಸ್ಪತ್ರೆಯಲ್ಲಿ ಜಿಡಿ ಅಗರ್ವಾಲ್ ಗಂಗಾ ನದಿ ಸ್ವಚ್ಛತೆಗಾಗಿ ಆಗ್ರಹಿಸಿ ಜೂ.22 ರಿಂದ ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಪ್ರೊ.ಜಿ.ಡಿ ಅಗರ್ವಾಲ್ ಅವರ ಆರೋಗ್ಯವನ್ನು ವಿಚಾರಿಸಿಕೊಳ್ಳುತ್ತಿದ್ದ ಸ್ವಾಮಿ ದಯಾನಂದ್ ಅವರು ನೀಡಿರುವ ಮಾಹಿತಿಯ ಪ್ರಕಾರ ಜಿಡಿ ಅಗರ್ವಾಲ್ ಅಥವಾ ಸ್ವಾಮಿ ಜ್ಞಾನ್ ಸ್ವರೂಪ್ ಸನಂದ್  ಅವರು ತೀವ್ರ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ. 
ಗಂಗಾ ನದಿ ಬಳಿ ನಡೆಸಲಾಗುತ್ತಿರುವ ಗಣಿಗಾರಿಕೆ ಹಾಗೂ ಹೈಡ್ರೋಪವರ್ ಯೋಜನೆಗಳನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ಜೂ.22 ರಿಂದ ಆಮರಣಾಂತ ಉಪವಾಸ ಕೈಗೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT