ಮನೇಕಾ ಗಾಂಧಿ 
ದೇಶ

ನಾಲ್ವರು ನಿವೃತ್ತ ನ್ಯಾಯಾಧೀಶರಿಂದ #MeToo ಪ್ರಕರಣಗಳ ವಿಚಾರಣೆ: ಮನೇಕಾ ಗಾಂಧಿ

#MeToo ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿರುವ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಮನೇಕಾ ಗಾಂಧಿ,...

ನವದೆಹಲಿ: ದೇಶದ ಎಲ್ಲಾ ನಗರಗಳಿಗೂ ವ್ಯಾಪಿಸಿರುವ #ಮಿ ಟೂ ಅಭಿಯಾನಕ್ಕೆ ಬೆಂಬಲ ವ್ಯಕ್ತಪಡಿಸಿರುವ  ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಮನೇಕಾ ಗಾಂಧಿ , ನಾಲ್ವರು ನಿವೃತ್ತ ನ್ಯಾಯಾಧೀಶರಿಂದ #MeToo ಪ್ರಕರಣಗಳ ವಿಚಾರಣೆ ನಡೆಸುವುದಾಗಿ ತಿಳಿಸಿದ್ದಾರೆ.

#ಮಿ ಟೂ ಅಭಿಯಾನದಿಂದ ಹೊರಗೆ ಬಂದ ಪ್ರಕರಣಗಳ ವಿಚಾರಣೆಗಾಗಿ ಹಿರಿಯ ನ್ಯಾಯಿಕ, ಕಾನೂನು ವ್ಯಕ್ತಿಗಳನ್ನೊಳಗೊಂಡ  ಸಮಿತಿ ರಚಿಸುವ ಪ್ರಸ್ತಾವವನ್ನು ಮನೇಕಾ ಗಾಂಧಿ ಮಾಡಿದ್ದಾರೆ.

ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಎಂ. ಜೆ.ಅಕ್ಬರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದ ಮೂರು ದಿನಗಳ ನಂತರ ಇದೇ ಮೊದಲ ಬಾರಿಗೆ ಅವರ   ವಿರುದ್ಧ ಧ್ವನಿ ಎತ್ತಿರುವ ಮನೇಕಾ ಗಾಂಧಿ, ಆರೋಪದ ಬಗ್ಗೆ ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂಪಾದಕರಾಗಿದ್ದ ಎಂ. ಜೆ. ಅಕ್ಬರ್ ವಿರುದ್ಧ ಸುಮಾರು 10 ಮಹಿಳೆಯರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಪುರುಷರು ಅಧಿಕಾರ ಕೇಂದ್ರಸ್ಥರಾಗಿದ್ದಾಗ ಇಂತಹ ಕೃತ್ಯಗಳು ನಡೆಯುತ್ತವೆ. ಈ ಬಗ್ಗೆ ತನಿಖೆ ನಡೆಯಬೇಕೆಂದು  ಇತ್ತೀಚಿಗೆ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ  ಮನೇಕಾ ಗಾಂಧಿ ಹೇಳಿದ್ದರು.

ಇಂತಹ ವರ್ತನೆಯಿಂದ ದೂರ ಉಳಿಯುತ್ತಿದ್ದ ದೇಶದ ಮಹಿಳೆಯರು ಇಂದು ಧೈರ್ಯಮಾಡಿ ಮಾತನಾಡುತ್ತಿದ್ದಾರೆ. ಈ ಆರೋಪಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು ಎಂದು ಹೇಳಿಕೆ ನೀಡಿದ್ದರು. ಆದರೆ, ಅವರು ಅಕ್ಬರ್ ರಾಜೀನಾಮೆ ಕೇಳಿಲ್ಲ.

#ಮಿಟೂ ಅಭಿಯಾನದಲ್ಲಿ ಹೊರಬಂದಿರುವ ಪ್ರಕರಣಗಳು ಯಾವಾಗ ನಡೆದಿದ್ದವು ಎಂಬುದರ ಬಗ್ಗೆ ಸರಿಯಾದ ಮಾಹಿತಿ ಇಲ್ಲ. ಅವುಗಳೆಲ್ಲವೂ ತಡವಾಗಿ ಬೆಳಕಿಗೆ ಬಂದಿದ್ದು, ಎಲ್ಲಾ ಪ್ರಕರಣಗಳ ವಿಚಾರಣೆ ನಡೆಸುವುದಾಗಿ ತಾವೂ ಈ ಹಿಂದೆ ನೀಡಿದ್ದ ಹೇಳಿಕೆಗೆ ಬದ್ಧವಿರುವುದಾಗಿ ಮನೇಕಾ ಗಾಂಧಿ ಪುನರ್ ಉಚ್ಚರಿಸಿದ್ದಾರೆ.

ಹಲವು ವರ್ಷಗಳ ಹಿಂದೆ ನಡೆದಿರುವ  ಲೈಂಗಿಕ ಪ್ರಕರಣಗಳ ವಿಚಾರಣೆಗಾಗಿ ಕಾನೂನಿನಲ್ಲಿ  ಸಮಯದ ಮಿತಿ ತೆಗೆದುಹಾಕುವಂತೆ ಕಾನೂನು ಆಯೋಗಕ್ಕೆ ಪತ್ರ ಬರೆದಿರುವುದಾಗಿ ಮನೇಕಾ ಗಾಂಧಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಿಗೆ 2ನೇ ವಿಮಾನ ನಿಲ್ದಾಣ: ಷರತ್ತಿನ ಅರಿವಿದೆ, ಮುಂದಾಲೋಚನೆಯಿಂದ ಟೆಂಡರ್ ಆಹ್ವಾನ

ಒಮನ್ ಭೇಟಿ ವೇಳೆ ಮೋದಿ ಹೊಸ ಸ್ಟೈಲ್ ಬಗ್ಗೆ ಭಾರಿ ಚರ್ಚೆ: ಪ್ರಧಾನಿ ಕಿವಿಗೆ ಧರಿಸಿದ್ದೇನು?

ನನಗೆ ರಾಜಕೀಯ ನಿಶ್ಯಕ್ತಿ ಎಂಬುದೇ ಇಲ್ಲ, 5 ವರ್ಷ ನಾನೇ ಸಿಎಂ: ಬೆಳಗಾವಿ ಅಧಿವೇಶನದಲ್ಲಿ ಸಿದ್ದರಾಮಯ್ಯ ಪುನರುಚ್ಛಾರ

ಬೆಂಗಳೂರು: ಮನೆ ಬಳಿ ಆಟವಾಡ್ತಿದ್ದ ಬಾಲಕನಿಗೆ 'ಕಾಲಿನಿಂದ ಒದ್ದು' ವಿಕೃತಿ! ಪಕ್ಕದ ಮನೆಯ ಆರೋಪಿ ಬಂಧನ, ಬಿಡುಗಡೆ

ಸಂಸತ್ ಅಧಿವೇಶನಕ್ಕೆ ತೆರೆ: ಲೋಕಸಭೆ, ರಾಜ್ಯಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

SCROLL FOR NEXT