ಸಾಂದರ್ಭಿಕ ಚಿತ್ರ 
ದೇಶ

ರಾತ್ರಿ ವೇಳೆ ಫೋನ್, ವಾಟ್ಸಾಪ್, ಮೆಸೇಜ್ ಮಾಡಿ ಮತದಾರರಿಗೆ ತೊಂದರೆ ಕೊಡಬೇಡಿ: ಚುನಾವಣಾ ಆಯೋಗ ತಾಕೀತು

ಸಾಮಾಜಿಕ ಮಾಧ್ಯಮಗಳ ಮೂಲಕ ರಾಜಕೀಯ ಮುಖಂಡರು ಮತ್ತು ಪಕ್ಷಗಳು ಮತದಾರರಿಗೆ ಹತ್ತಿರವಾಗಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿ ಚುನಾವಣಾ ಆಯೋಗ ಕೆಲವು ನಿಬಂಧನೆ ...

ನವದೆಹಲಿ: ಸಾಮಾಜಿಕ ಮಾಧ್ಯಮಗಳ ಮೂಲಕ ರಾಜಕೀಯ ಮುಖಂಡರು ಮತ್ತು ಪಕ್ಷಗಳು ಮತದಾರರಿಗೆ ಹತ್ತಿರವಾಗಲು ಪ್ರಯತ್ನಿಸುತ್ತಿರುವ ಸಂದರ್ಭದಲ್ಲಿ ಚುನಾವಣಾ ಆಯೋಗ ಕೆಲವು ನಿಬಂಧನೆ ಹೇರಿದೆ. ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಾಜಕೀಯ ಸಂದೇಶಗಳು ಜನರ ಖಾಸಗಿತನಕ್ಕೆ ತೊಂದರೆಯಾಗಬಾರದು ಎಂದು ಹೇಳಿದೆ.

ಚುನಾವಣಾ ಪ್ರಕ್ರಿಯೆ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮಗಳು ಮಿತಿಮೀರಿ ಬಳಕೆಯಾಗುತ್ತಿರುವುದನ್ನು ಗಮನಿಸಿರುವ ಚುನಾವಣಾ ಆಯೋಗ, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವವರೆಗೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಯಾವುದೇ ರಾಜಕೀಯ ಪಕ್ಷಗಳಾಗಲಿ, ಅಭ್ಯರ್ಥಿಗಳಾಗಲಿ ಮತದಾರರಿಗೆ ಕರೆ ಮಾಡುವುದು, ಸಂದೇಶ ಕಳುಹಿಸುವುದು, ವಾಟ್ಸಾಪ್ ಮಾಡುವುದು ಇತ್ಯಾದಿಗಳನ್ನು ಮಾಡಬಾರದು ಎಂದು ಹೇಳಿದೆ.

ನಾಗರಿಕರ ಖಾಸಗಿತನವನ್ನು ಗೌರವಿಸಿ ಅವರ ಜೀವನಕ್ಕೆ ತೊಂದರೆ ನೀಡಬಾರದು ಎಂದು ಚುನಾವಣಾ ಆಯೋಗ ತಿಳಿಸಿದೆ. ಮತದಾರರ ಮನೆ ಮನೆಗೆ ತೆರಳುವುದು ಮತ್ತು ಧ್ವನಿವರ್ಧಕಗಳ ಬಳಕೆಯನ್ನು ಕೂಡ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಬಳಸುವುದಕ್ಕೆ ನಿಷೇಧ ಹೇರಿದೆ.

ಚುನಾವಣೆಗೆ ಸಂಬಂಧಪಟ್ಟಂತೆ ಮಾಧ್ಯಮಗಳಲ್ಲಿ ಸುದ್ದಿ ನೀಡುವ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಿರುವ ಚುನಾವಣಾ ಆಯೋಗ, ಸುದ್ದಿ ಮಾಧ್ಯಮಗಳು ರಾಜಕೀಯ ನಾಯಕರ ರೊಚ್ಚಿನ ಭಾಷಣಗಳನ್ನು ಅಥವಾ ಇತರ ಜಿಗುಪ್ಸೆ ಹುಟ್ಟಿಸುವ ರಾಜಕೀಯ ನಾಯಕರ ಮಾತುಗಳನ್ನು ಬಿತ್ತರಿಸಬಾರದು, ಇದರಿಂದ ಸಮಾಜದಲ್ಲಿ ಹಿಂಸೆ ಉಂಟಾಗಿ ಸಾರ್ವಜನಿಕರ ಶಾಂತಿಯುತ ಜೀವನಕ್ಕ ಧಕ್ಕೆಯುಂಟಾಗಬಹುದು, ಗಲಾಟೆ ಏಳುವ ಸಾಧ್ಯತೆಯಿದೆ ಎಂದು  ಎಚ್ಚರಿಕೆ ನೀಡಿದೆ.

ಜನರಲ್ಲಿ ದ್ವೇಷ, ಶತ್ರುಭಾವನೆ ಹುಟ್ಟಿಸುವ ಭಾಷಣಗಳನ್ನು ಸುದ್ದಿ ಮಾಧ್ಯಮಗಳು ಕಡ್ಡಾಯವಾಗಿ ಪ್ರಸಾರ ಮಾಡಬಾರದು, ಜಾತಿ, ಧರ್ಮ, ಪಂಥ, ಸಮುದಾಯ, ನಿರ್ದಿಷ್ಟ ಜನಾಂಗ, ಭಾಷೆಗಳ ಆಧಾರದ ಮೇಲೆ ಚುನಾವಣಾ ಪ್ರಕ್ರಿಯೆ ಸಂದರ್ಭದಲ್ಲಿ ಜನರ ಭಾವನೆಗಳನ್ನು ಪ್ರಚೋದಿಸುವ ಸುದ್ದಿಗಳನ್ನು ಕಡ್ಡಾಯವಾಗಿ ಪ್ರಸಾರ ಮಾಡದಂತೆ ಆಯೋಗ ಸುದ್ದಿ ಮಾಧ್ಯಮಗಳಿಗೆ ತಾಕೀತು ಮಾಡಿದೆ.

ಸೆಕ್ಷನ್ 126ರಲ್ಲಿ ಹೇಳಿರುವಂತೆ ಮತದಾನ ಮುಗಿದ 48 ಗಂಟೆಗಳಲ್ಲಿ ರೇಡಿಯೋ ಮತ್ತು ಸುದ್ದಿ ವಾಹಿನಿಗಳಲ್ಲಿ ಬಿತ್ತರಿಸುವ ರಾಜಕೀಯ ವಿಶ್ಲೇಷಣೆಗಳು, ಪರಿಣಿತರ ಅಭಿಪ್ರಾಯಗಳು ಯಾವುದೇ ರಾಜಕೀಯ ಪಕ್ಷ ಅಥವಾ ಅಭ್ಯರ್ಥಿಗಳ ಭವಿಷ್ಯದ ಕುರಿತು ಪ್ರಚಾರ ಮಾಡುವ ರೀತಿ ಅಥವಾ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರಬಾರದು. ಚುನಾವಣೋತ್ತರ ಫಲಿತಾಂಶಗಳು, ವಿಶ್ಲೇಷಣೆಗಳು, ಚರ್ಚೆಗಳು, ದೃಶ್ಯಗಳು ಮತ್ತು ಯಾರದ್ದಾದರೂ ಅಭಿಪ್ರಾಯಗಳು ಆಯೋಗ ಹೊರಡಿಸಿದ ಮಾರ್ಗಸೂಚಿಯ ಒಳಗೆಯೇ ಇರಬೇಕು ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT