ಸಚಿನ್ ಪೈಲಟ್ ಮತ್ತು ಕಮಲನಾಥ್ 
ದೇಶ

ಮತಾದಾರರ ಪಟ್ಟಿಯಲ್ಲಿ ಲೋಪದೋಷ: ಸುಪ್ರೀಂನಿಂದ ಕಮಲ್ ನಾಥ್, ಸಚಿನ್ ಪೈಲಟ್ ಅರ್ಜಿ ವಜಾ

ಮಧ್ಯ ಪ್ರದೇಶ ಮತ್ತು ರಾಜಸ್ಥಾನದಲ್ಲಿನ ಮತದಾರರ ಕರಡು ಪಟ್ಟಿಯನ್ನು ಪಠ್ಯ ರೂಪ್ಯದಲ್ಲಿ ಒದಗಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶ ನೀಡಬೇಕೆಂದು ...

ನವದೆಹಲಿ:  ಮಧ್ಯ ಪ್ರದೇಶ ಮತ್ತು ರಾಜಸ್ಥಾನದಲ್ಲಿನ ಮತದಾರರ ಕರಡು ಪಟ್ಟಿಯನ್ನು ಪಠ್ಯ ರೂಪ್ಯದಲ್ಲಿ ಒದಗಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶ ನೀಡಬೇಕೆಂದು ಕೋರಿ ಹಿರಿಯ ಕಾಂಗ್ರೆಸ್‌ ನಾಯಕರಾದ ಕಮಲ್‌ ನಾಥ್‌ ಮತ್ತು ಸಚಿನ್‌ ಪೈಲಟ್‌ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ ಇಂದು ವಜಾ ಮಾಡಿದೆ. 
ಮಧ್ಯಪ್ರದೇಶದಲ್ಲಿ ನ.28ರಂದು ಮತ್ತು ರಾಜಸ್ಥಾನದಲ್ಲಿ ಡಿ.7ರಂದು ವಿಧಾನಸಭಾ ಚುನಾವಣೆ ನಡೆಯಲಿದೆ.
ನ್ಯಾಯಮೂರ್ತಿ ಎ ಕೆ ಸಿಕ್ರಿ ಮತ್ತು ಅಶೋಕ್‌ ಭೂಷಣ್‌ ಅವರನ್ನು ಒಳಗೊಂಡ ಸುಪ್ರೀಂ ಪೀಠ, "ನಾವು ಈ ಅರ್ಜಿಗಳನ್ನು ವಜಾ ಮಾಡುತ್ತಿದ್ದೇವೆ' ಎಂದು ಹೇಳಿದೆ. ಮದ್ಯಪ್ರದೇಶದ ಮತದಾರರ ಪಟ್ಟಿಯಲ್ಲಿ 60 ಸಾವಿರ ನಕಲಿ ಮತದಾರರ ಹೆಸರಿದೆ ಎಂದು ಕಮಲ್ ನಾಥ್ ಆರೋಪಿಸಿದ್ದರು. 
ಮತದಾರರ ಪಟ್ಟಿಯಲ್ಲಿ ಅನೇಕ ಹೆಸರುಗಳು ಹಲವು ಬಾರಿ ಕಂಡು ಬರುತ್ತಿರುವ ಕಾರಣ ಮುಕ್ತ ಮತ್ತು ನ್ಯಾಯೋಚಿತ ಚುನಾವಣೆಗಳನ್ನು ನಡೆಸುವ ಸಲುವಾಗಿ ಈ ದೋಷಗಳನ್ನು ಸರಿಪಡಿಸಬೇಕಾಗಿದೆ ಎಂಬ ಅರ್ಜಿಗಳ ಮೇಲಿನ ತೀರ್ಪನ್ನು ಸುಪ್ರೀಂ ಕೋರ್ಟ್‌ ಅ.8ರಂದು ಕಾದಿರಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT