ಸಂಗ್ರಹ ಚಿತ್ರ 
ದೇಶ

ಉತ್ತರಪ್ರದೇಶ: ಬೊಗಳುತ್ತಿದ್ದ ನಾಯಿಗೆ ಹೊಡೆದ ವ್ಯಕ್ತಿ ಮೇಲೆ ಗುಂಡಿನ ದಾಳಿ!

ತನ್ನನ್ನು ನೋಡಿ ಬೊಗಳುತ್ತಿದ್ದ ನಾಯಿಗೆ ವ್ಯಕ್ತಿಯೊಬ್ಬ ಹೊಡೆದಿದ್ದು, ಈ ವೇಳೆ ವ್ಯಕ್ತಿ ಮೇಲೆ ಕೆಂಡಾಮಂಡಲಗೊಂಡ ಮೂವರು ಆತನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಉತ್ತರಪ್ರದೇಶದ ಶಮ್ಲಿ ಜಿಲ್ಲೆಯ ಬಧೇವ್ ಗ್ರಾಮದಲ್ಲಿ ಭಾನುವಾರ ನಡೆದಿದೆ...

ಮುಜಾಫರ್ನಗರ: ತನ್ನನ್ನು ನೋಡಿ ಬೊಗಳುತ್ತಿದ್ದ ನಾಯಿಗೆ ವ್ಯಕ್ತಿಯೊಬ್ಬ ಹೊಡೆದಿದ್ದು, ಈ ವೇಳೆ ವ್ಯಕ್ತಿ ಮೇಲೆ ಕೆಂಡಾಮಂಡಲಗೊಂಡ ಮೂವರು ಆತನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಉತ್ತರಪ್ರದೇಶದ ಶಮ್ಲಿ ಜಿಲ್ಲೆಯ ಬಧೇವ್ ಗ್ರಾಮದಲ್ಲಿ ಭಾನುವಾರ ನಡೆದಿದೆ. 
ಸಚಿನ್ ಕಶ್ಯಪ್ ಎಂಬುವವರು ನಿನ್ನೆ ಸಂಜೆ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ರಸ್ತೆಯಲ್ಲಿದ್ದ ನಾಯಿಯೊಂದು ಅವರನ್ನು ನೋಡಿ ಬೊಗಳಲು ಆರಂಭಿಸಿದೆ. ಅಲ್ಲದೆ, ಹಿಂಬಾಲಿಸಲು ಆರಂಭಿಸಿದೆ. 
ಈ ವೇಳೆ ಕಶ್ಯಪ್ ನಾಯಿಗೆ ಹೊಡೆದಿದ್ದಾರೆ. ಇದಕ್ಕೆ ಸ್ಥಳದಲ್ಲಿದ್ದ ಮೂವರು ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮಾತಿನ ಚಕಮಕಿಗಳೂ ಕೂಡ ನಡೆದಿದೆ. ಈ ವೇಳೆ ಕಶ್ಯಪ್ ಮೇಲೆ ಕೆಂಡಾಮಂಡಲಗೊಂಡಿರುವ ವ್ಯಕ್ತಿಯೊಬ್ಬ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆಂದು ಪೊಲೀಸ್ ಅಧಿಕಾರಿ ಅಶೋಕ್ ಕುಮಾರ್ ಅವರು ಹೇಳಿದ್ದಾರೆ. 
ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT