ಸಂಗ್ರಹ ಚಿತ್ರ 
ದೇಶ

ಉತ್ತರಪ್ರದೇಶ: ಬೊಗಳುತ್ತಿದ್ದ ನಾಯಿಗೆ ಹೊಡೆದ ವ್ಯಕ್ತಿ ಮೇಲೆ ಗುಂಡಿನ ದಾಳಿ!

ತನ್ನನ್ನು ನೋಡಿ ಬೊಗಳುತ್ತಿದ್ದ ನಾಯಿಗೆ ವ್ಯಕ್ತಿಯೊಬ್ಬ ಹೊಡೆದಿದ್ದು, ಈ ವೇಳೆ ವ್ಯಕ್ತಿ ಮೇಲೆ ಕೆಂಡಾಮಂಡಲಗೊಂಡ ಮೂವರು ಆತನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಉತ್ತರಪ್ರದೇಶದ ಶಮ್ಲಿ ಜಿಲ್ಲೆಯ ಬಧೇವ್ ಗ್ರಾಮದಲ್ಲಿ ಭಾನುವಾರ ನಡೆದಿದೆ...

ಮುಜಾಫರ್ನಗರ: ತನ್ನನ್ನು ನೋಡಿ ಬೊಗಳುತ್ತಿದ್ದ ನಾಯಿಗೆ ವ್ಯಕ್ತಿಯೊಬ್ಬ ಹೊಡೆದಿದ್ದು, ಈ ವೇಳೆ ವ್ಯಕ್ತಿ ಮೇಲೆ ಕೆಂಡಾಮಂಡಲಗೊಂಡ ಮೂವರು ಆತನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಉತ್ತರಪ್ರದೇಶದ ಶಮ್ಲಿ ಜಿಲ್ಲೆಯ ಬಧೇವ್ ಗ್ರಾಮದಲ್ಲಿ ಭಾನುವಾರ ನಡೆದಿದೆ. 
ಸಚಿನ್ ಕಶ್ಯಪ್ ಎಂಬುವವರು ನಿನ್ನೆ ಸಂಜೆ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ರಸ್ತೆಯಲ್ಲಿದ್ದ ನಾಯಿಯೊಂದು ಅವರನ್ನು ನೋಡಿ ಬೊಗಳಲು ಆರಂಭಿಸಿದೆ. ಅಲ್ಲದೆ, ಹಿಂಬಾಲಿಸಲು ಆರಂಭಿಸಿದೆ. 
ಈ ವೇಳೆ ಕಶ್ಯಪ್ ನಾಯಿಗೆ ಹೊಡೆದಿದ್ದಾರೆ. ಇದಕ್ಕೆ ಸ್ಥಳದಲ್ಲಿದ್ದ ಮೂವರು ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮಾತಿನ ಚಕಮಕಿಗಳೂ ಕೂಡ ನಡೆದಿದೆ. ಈ ವೇಳೆ ಕಶ್ಯಪ್ ಮೇಲೆ ಕೆಂಡಾಮಂಡಲಗೊಂಡಿರುವ ವ್ಯಕ್ತಿಯೊಬ್ಬ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆಂದು ಪೊಲೀಸ್ ಅಧಿಕಾರಿ ಅಶೋಕ್ ಕುಮಾರ್ ಅವರು ಹೇಳಿದ್ದಾರೆ. 
ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT