ಸಂಗ್ರಹ ಚಿತ್ರ 
ದೇಶ

ಉತ್ತರಪ್ರದೇಶ: ಬೊಗಳುತ್ತಿದ್ದ ನಾಯಿಗೆ ಹೊಡೆದ ವ್ಯಕ್ತಿ ಮೇಲೆ ಗುಂಡಿನ ದಾಳಿ!

ತನ್ನನ್ನು ನೋಡಿ ಬೊಗಳುತ್ತಿದ್ದ ನಾಯಿಗೆ ವ್ಯಕ್ತಿಯೊಬ್ಬ ಹೊಡೆದಿದ್ದು, ಈ ವೇಳೆ ವ್ಯಕ್ತಿ ಮೇಲೆ ಕೆಂಡಾಮಂಡಲಗೊಂಡ ಮೂವರು ಆತನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಉತ್ತರಪ್ರದೇಶದ ಶಮ್ಲಿ ಜಿಲ್ಲೆಯ ಬಧೇವ್ ಗ್ರಾಮದಲ್ಲಿ ಭಾನುವಾರ ನಡೆದಿದೆ...

ಮುಜಾಫರ್ನಗರ: ತನ್ನನ್ನು ನೋಡಿ ಬೊಗಳುತ್ತಿದ್ದ ನಾಯಿಗೆ ವ್ಯಕ್ತಿಯೊಬ್ಬ ಹೊಡೆದಿದ್ದು, ಈ ವೇಳೆ ವ್ಯಕ್ತಿ ಮೇಲೆ ಕೆಂಡಾಮಂಡಲಗೊಂಡ ಮೂವರು ಆತನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಉತ್ತರಪ್ರದೇಶದ ಶಮ್ಲಿ ಜಿಲ್ಲೆಯ ಬಧೇವ್ ಗ್ರಾಮದಲ್ಲಿ ಭಾನುವಾರ ನಡೆದಿದೆ. 
ಸಚಿನ್ ಕಶ್ಯಪ್ ಎಂಬುವವರು ನಿನ್ನೆ ಸಂಜೆ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ರಸ್ತೆಯಲ್ಲಿದ್ದ ನಾಯಿಯೊಂದು ಅವರನ್ನು ನೋಡಿ ಬೊಗಳಲು ಆರಂಭಿಸಿದೆ. ಅಲ್ಲದೆ, ಹಿಂಬಾಲಿಸಲು ಆರಂಭಿಸಿದೆ. 
ಈ ವೇಳೆ ಕಶ್ಯಪ್ ನಾಯಿಗೆ ಹೊಡೆದಿದ್ದಾರೆ. ಇದಕ್ಕೆ ಸ್ಥಳದಲ್ಲಿದ್ದ ಮೂವರು ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮಾತಿನ ಚಕಮಕಿಗಳೂ ಕೂಡ ನಡೆದಿದೆ. ಈ ವೇಳೆ ಕಶ್ಯಪ್ ಮೇಲೆ ಕೆಂಡಾಮಂಡಲಗೊಂಡಿರುವ ವ್ಯಕ್ತಿಯೊಬ್ಬ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆಂದು ಪೊಲೀಸ್ ಅಧಿಕಾರಿ ಅಶೋಕ್ ಕುಮಾರ್ ಅವರು ಹೇಳಿದ್ದಾರೆ. 
ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT