ಮುಜಾಫರ್ನಗರ: ತನ್ನನ್ನು ನೋಡಿ ಬೊಗಳುತ್ತಿದ್ದ ನಾಯಿಗೆ ವ್ಯಕ್ತಿಯೊಬ್ಬ ಹೊಡೆದಿದ್ದು, ಈ ವೇಳೆ ವ್ಯಕ್ತಿ ಮೇಲೆ ಕೆಂಡಾಮಂಡಲಗೊಂಡ ಮೂವರು ಆತನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಉತ್ತರಪ್ರದೇಶದ ಶಮ್ಲಿ ಜಿಲ್ಲೆಯ ಬಧೇವ್ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಸಚಿನ್ ಕಶ್ಯಪ್ ಎಂಬುವವರು ನಿನ್ನೆ ಸಂಜೆ ಮನೆಗೆ ಹಿಂತಿರುಗುತ್ತಿದ್ದರು. ಈ ವೇಳೆ ರಸ್ತೆಯಲ್ಲಿದ್ದ ನಾಯಿಯೊಂದು ಅವರನ್ನು ನೋಡಿ ಬೊಗಳಲು ಆರಂಭಿಸಿದೆ. ಅಲ್ಲದೆ, ಹಿಂಬಾಲಿಸಲು ಆರಂಭಿಸಿದೆ.
ಈ ವೇಳೆ ಕಶ್ಯಪ್ ನಾಯಿಗೆ ಹೊಡೆದಿದ್ದಾರೆ. ಇದಕ್ಕೆ ಸ್ಥಳದಲ್ಲಿದ್ದ ಮೂವರು ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಮಾತಿನ ಚಕಮಕಿಗಳೂ ಕೂಡ ನಡೆದಿದೆ. ಈ ವೇಳೆ ಕಶ್ಯಪ್ ಮೇಲೆ ಕೆಂಡಾಮಂಡಲಗೊಂಡಿರುವ ವ್ಯಕ್ತಿಯೊಬ್ಬ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾನೆಂದು ಪೊಲೀಸ್ ಅಧಿಕಾರಿ ಅಶೋಕ್ ಕುಮಾರ್ ಅವರು ಹೇಳಿದ್ದಾರೆ.
ಈ ಸಂಬಂಧ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos