ವೈಷ್ಣೋದೇವಿ ಯಾತ್ರಾರ್ಥಿಗಳಿಗೆ 5 ಲಕ್ಷ ರೂಪಾಯಿ ವಿಮೆ 
ದೇಶ

ವೈಷ್ಣೋದೇವಿ ಯಾತ್ರಾರ್ಥಿಗಳಿಗೆ 5 ಲಕ್ಷ ರೂಪಾಯಿ ವಿಮೆ

ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ನೀಡಲಾಗುವ ಉಚಿತ ವಿಮೆ ಮೊತ್ತವನ್ನು 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ.

ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ನೀಡಲಾಗುವ ಉಚಿತ ವಿಮೆ ಮೊತ್ತವನ್ನು 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. 
ಅ.14 ರಂದು ಶ್ರೀನಗರದ ರಾಜಭವನದಲ್ಲಿ ನಡೆದ ದೇವಾಲಯದ ಆಡಳಿತ ಮಂಡಳಿಯ 63 ನೇ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಜಮ್ಮು-ಕಾಶ್ಮೀರದ ರಾಜ್ಯಪಾಲ ಸತ್ಯ ಪಾಲ್ ಮಲೀಕ್ ದೇವಾಲಯದ ಮಂಡಳಿಯ ಅಧ್ಯಕ್ಷರೂ ಆಗಿದ್ದು, ಯಾತ್ರಾರ್ಥಿಗಳಿಗೆ ನೀಡಲಾಗುವ ಉಚಿತ ವಿಮೆ ಮೊತ್ತವನ್ನು 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ ಎಂದು ತಿಳಿಸಲಾಗಿದೆ. 
ಈಗಿರುವ ನಿಯಮಗಳ ಪ್ರಕಾರ 5 ವರ್ಷದ ಮೇಲ್ಪಟ್ಟವರಿಗೆ 3 ಲಕ್ಷ ರೂಪಾಯಿ ಉಚಿತ ವಿಮೆ ಅನ್ವಯವಾಗುತ್ತಿತ್ತು, 5 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ 1 ಲಕ್ಷರೂಪಾಯಿ ವಿಮೆ ಅನ್ವಯವಾಗುತ್ತಿತ್ತು. ಭವನ್ ಹಾಗೂ ಭೈರೋನ್ ಘಾಟಿ ನಡುವೆ ರೋಪ್ ವೇ ಯನ್ನು ಬಳಕೆ ಮಾಡುವ ಪ್ರಯಾಣಿಕರಿಗೆ ಹೆಚ್ಚುವರಿ 5 ಲಕ್ಷದ ವಿಮೆ ಅನ್ವಯವಾಗಲಿದೆ ಎಂದು ಆಡಳಿತ ಮಂಡಳಿ ಹೇಳಿಕೆಯಲ್ಲಿ ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Video: ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಅಮೆರಿಕ ದಾಳಿ; ಕನಿಷ್ಠ 87 ನಾವಿಕರು ಸಾವು

ವಾಣಿಜ್ಯ, ಕೈಗಾರಿಕಾ ವಲಯಕ್ಕೆ ವಿದ್ಯುತ್ ದರ ಏರಿಕೆ ಶಾಕ್; ಆದ್ರೆ ರೈತರಿಗೆ ಗುಡ್ ನ್ಯೂಸ್!

ಬಿಹಾರದಲ್ಲಿ ರಾಜಕೀಯ ಬಿರುಗಾಳಿ: ಮುಖ್ಯಮಂತ್ರಿ ಸ್ಥಾನಕ್ಕೆ ನಿತಿಶ್ ಕುಮಾರ್ ರಾಜೀನಾಮೆ?

ಖಮೇನಿ ಹತ್ಯೆ ಕುರಿತು ಪೋಸ್ಟ್‌: ಎನ್‌ಸಿ ಸಂಸದ, ಶ್ರೀನಗರ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್ ದಾಖಲು

'ದೇಹದ ಮೇಲೆ ಕ್ಯಾಮೆರಾ Zoom': ಪಾಪರಾಜಿಗಳ ವಿರುದ್ಧ ಸಪ್ತಮಿಗೌಡ ಕಿಡಿ; Rukmini Vasanth ಬೆಂಬಲ!

SCROLL FOR NEXT