ನೇತಾಜಿ ಸುಭಾಷ್ ಚಂದ್ರ ಬೋಸ್ 
ದೇಶ

ನೇತಾಜಿ ಜೀವದಿಂದಿದ್ದಾರೆಯೆ ಇಲ್ಲವೆ? 'ನ್ಯಾಯಯುತ' ಉತ್ತರ ನೀಡಿ: ರಾಷ್ಟ್ರೀಯ ಪತ್ರಾಗಾರಕ್ಕೆ ಸಿಐಸಿ ನಿರ್ದೇಶನ

ಭಾರತ ಸ್ವಾತಂತ್ರ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಮರಣ ಹೊಂದಿದ್ದಾರೆಯೆ ಅಥವಾ ಜೀವದಿಂದಿದ್ದಾರೆಯೆ ಎನ್ನುವ ಕುರಿತು ವಿವರಣೆ ಕೇಳಿ ಆರ್ತೀಐ ಕಾರ್ಯಕರ್ತ.....

ನವದೆಹಲಿ: ಭಾರತ ಸ್ವಾತಂತ್ರ ಹೋರಾಟಗಾರ ನೇತಾಜಿ ಸುಭಾಷ್ ಚಂದ್ರ ಬೋಸ್ ಮರಣ ಹೊಂದಿದ್ದಾರೆಯೆ ಅಥವಾ ಜೀವದಿಂದಿದ್ದಾರೆಯೆ ಎನ್ನುವ ಕುರಿತು ವಿವರಣೆ ಕೇಳಿ ಆರ್ತೀಐ ಕಾರ್ಯಕರ್ತರು ಪ್ರಧಾನಿ ಕಛೇರಿಗೆ ಅರ್ಜಿ ಹಾಕಿದ್ದು ಇದಕ್ಕೆ  "ನ್ಯಾಯಯುತ" ಪ್ರತಿಕ್ರಿಯೆಯನ್ನು ನೀಡಬೇಕೆಂದು ಕೇಂದ್ರ ಮಾಹಿತಿ ಆಯೋಗವು ರಾಷ್ಟ್ರೀಯ ಪತ್ರಾಗಾರಕ್ಕೆ ಸೂಚಿಸಿದೆ.
ಆರ್ಟಿಐ ಕಾರ್ಯಕರ್ತರಾದ ಅವದೇಶ್ ಕುಮಾರ್ ಚತುರ್ವೇದಿ  2015 ಮತ್ತು 2016ರಲ್ಲಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ಪ್ರಧಾನಿಗಳೇಕೆ ಅವರಿಗೆ ಗೌರವ ಸಲ್ಲಿಸಿದ್ದರು ಎಂದು ವಿವರಿಸಲು ಕೇಳಿದ್ದಾರೆ.
ಆದರೆ ಈ ಸಂಬಂಧ ಪ್ರಧಾನಿ ಕಛೇರಿಯಿಂದ ತೃಪ್ತಿಕರ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಚತುರ್ವೇದಿ ಆರ್ಟಿಐ ವಿಷಯಗಳಲ್ಲಿ ಅತ್ಯುನ್ನತ ಮೇಲ್ಮನವಿ ಪ್ರಾಧಿಕಾರವಾದ ಸಿಐಸಿಗೆ ಈ ಸಂಬಂಧ ಅರ್ಜಿ ಸಲ್ಲಿಸಿದ್ದಾರೆ.ಬೋಸ್ ಮರಣ ಸಂಬಂಧ ಅವರು ಇದುವರೆಗೆ ಯಾವ ಅಧಿಕೃತ ಮಾಹಿತಿ ಸ್ವೀಕರಿಸಿಲ್ಲ ಎಂದು ಅವರು ಅರ್ಜಿಯಲ್ಲಿ ತಿಳಿಸಿದ್ದಾರೆ.
ಆದರೆ ಪ್ರಧಾನಿ ಕಛೇರಿಯು ಆರ್ಟಿಐ ಅರ್ಜಿಯ ವಿಚಾರವು ಸಂಸ್ಕೃತಿ ಸಚಿವಾಲಯಕ್ಕೆ ಸಂಬಂಧಿಸಿರುವುದರಿಂದ ಅರ್ಜಿಯನ್ನು ಆ ಸಚಿವಾಲಯಕ್ಕೆ ವರ್ಗಾಯಿಸಿರುವುದಾಗಿ ಹೇಳಿದೆ. ಅಲ್ಲದೆ , ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಬಹಿರಂಗಪಡಿಸಲಾಗಿದೆ, ಅವುಗಳ ಶಾಶ್ವತ ಪ್ರಯೋಜನಕ್ಕಾಗಿ ಅವುಗಳನ್ನು ರಾಷ್ಟ್ರೀಯ ಪತ್ರಾಗಾರಕ್ಕೆ ಕಳಿಸಲಾಗಿದೆ ಎಂದು ಪಿಎಂಒ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ ಹೇಳಿದರೆಂದು ಮುಖ್ಯ ಮಾಹಿತಿ ಆಯುಕ್ತ ಆರ್ ಕೆ ಮಾಥುರ್ ಹೇಳಿದ್ದಾರೆ.
ಈ ಅರ್ಜಿ ಸಲ್ಲಿಕೆಯಾಗಿ 15 ದಿನಗಳಲ್ಲಿ ಅರ್ಜಿದಾರರಿಗೆ "ನ್ಯಾಯಯುತ" ಉತ್ತರ ನೀಡಬೇಕು ಎಂದು ರಾಷ್ಟ್ರೀಯ ಪತ್ರಾಗಾರಕ್ಕೆ ವರದಿ ಮಾಡಲಾಗಿದೆ ಎಂದು ಮಾಥುರ್ ಹೇಳಿದರು.
1942 ರಲ್ಲಿ ಬ್ರಿಟಿಷ್ ವಿರುದ್ಧ ಹೋರಾಟ ನಡೆಸಲು ಜಪಾನಿ ಪಡೆಗಳ ಬೆಂಬಲದೊಂದಿಗೆ ಬೋಸ್ ಆಜಾದ್ ಹಿಂದ್ ಫೌಜ್ ಎಂದು ಕರೆಯಲ್ಪಡುವ ಭಾರತ ರಾಷ್ಟ್ರೀಯ ಸೇನೆಯನ್ನು ಕಟ್ಟಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT