ಶಬರಿಮಲೆ ದೇವಾಲಯ 
ದೇಶ

ಸುಪ್ರೀಂ ಆದೇಶಕ್ಕೆ ಡೋಂಟ್ ಕೇರ್ : ಶಬರಿಮಲೆ ಮಹಿಳೆಯರ ಪ್ರವೇಶಕ್ಕೆ ತಡೆ!

ಸುಪ್ರೀಂಕೋರ್ಟ್ ತೀರ್ಪನ್ನು ಅನುಷ್ಠಾನಗೊಳಿಸುವುದಾಗಿ ಎಲ್ ಡಿಎಫ್ ಸರ್ಕಾರದ ಮುಖ್ಯಮಂತ್ರಿ ಪಿಣರಾಯ್ ವಿಜಯ್ ಹೇಳುತ್ತಿದ್ದರೂ ಇಂದು ಶಬರಿಮಲೆಯ ನೀಲಕಂಠದಲ್ಲಿ ಕೆಎಸ್ ಆರ್ ಟಿಸಿ ಬಸ್ ನಿಂದ ಮಹಿಳಾ ಭಕ್ತಾಧಿಗಳನ್ನು ಪ್ರತಿಭಟನಾಕಾರರು ಹೊರದಬ್ಬಿದ ಘಟನೆ ನಡೆದಿದೆ.

ನೀಲಕಂಠ: ಕೇರಳದ ಪ್ರಸಿದ್ಧ ಯಾತ್ರಾ ಸ್ಥಳ ಶಬರಿಮಲೆಗೆ ಮಹಿಳೆಯರ ಅವಕಾಶ ಕಲ್ಪಿಸುವ ಸುಪ್ರೀಂಕೋರ್ಟ್ ತೀರ್ಪನ್ನು ಅನುಷ್ಠಾನಗೊಳಿಸುವುದಾಗಿ ಎಲ್ ಡಿಎಫ್ ಸರ್ಕಾರದ ಮುಖ್ಯಮಂತ್ರಿ ಪಿಣರಾಯ್ ವಿಜಯ್ ಹೇಳುತ್ತಿದ್ದರೂ ಇಂದು ಶಬರಿಮಲೆಯ  ನೀಲಕಂಠದಲ್ಲಿ ಕೆಎಸ್ ಆರ್ ಟಿಸಿ ಬಸ್ ನಿಂದ ಮಹಿಳಾ ಭಕ್ತಾಧಿಗಳನ್ನು ಪ್ರತಿಭಟನಾಕಾರರು ಹೊರದಬ್ಬಿದ ಘಟನೆ ನಡೆದಿದೆ.

ತುಳ್ಳಂ ಪೂಜೆಗಾಗಿ ನಾಳೆಯಿಂದ ದೇವಸ್ಥಾನ ಪುನರ್ ಆರಂಭಗೊಳ್ಳಲಿದೆ. ಈ ಮಧ್ಯೆ ಯಾರೊಬ್ಬರು ಕಾನೂನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ ಎಂದು ವಿಜಯ್ ಪಿಣರಾಯ್  ಎಚ್ಚರಿಕೆಯ ಸಂದೇಶ ರವಾನಿಸಿದ್ದು, ಶಬರಿಮಲೆಗೆ ತೆರಳುವ ಎಲ್ಲ ಭಕ್ತರೂ ಪೂಜೆ ಸಲ್ಲಿಸಲು ಸರ್ಕಾರ ಎಲ್ಲಾ ವ್ಯವ್ಯಸ್ಥೆ ಮಾಡಲಿದೆ ಎಂದು ಹೇಳಿದ್ದಾರೆ.

ಪಂಪಾ ನದಿ ದಂಡೆಯಲ್ಲಿ ಮಹಿಳಾ ಪೊಲೀಸ್  ಸಿಬ್ಬಂದಿ ನಿಯೋಜಿಸುವ ಸಾಧ್ಯತೆ ಇದೆ ಎಂದು ಪೊಲೀಸ್ ಅಧಿಕಾರಿಗಳ ಮೂಲಗಳಿಂದ ತಿಳಿದುಬಂದಿದೆ. ಈ ಹಿಂದೆಯೂ ಕೂಡಾ ಮಹಿಳಾ ಅಧಿಕಾರಿಗಳನ್ನು ಆಯೋಜಿಸಲಾಗಿತ್ತು, ಆದಾಗ್ಯೂ,  ಸನ್ನಿದಿಯಲ್ಲಿ ಮಹಿಳಾ ಅಧಿಕಾರಿ ನಿಯೋಜಿಸುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಪರ ಹಾಗೂ ವಿರೋಧವಾದ ಅಭಿಪ್ರಾಯಗಳು ಕೇಳಿಬರುತ್ತಿದ್ದು, ಹಿಂದೂ ಸಂಘಟನೆಗಳು ಹಾಗೂ ಬಿಜೆಪಿ ಸುಪ್ರೀಂಕೋರ್ಟ್ ತೀರ್ಪಿಗೆ ವಿರೋಧ ವ್ಯಕ್ತಪಡಿಸಿದ್ದರೆ. ಆಡಳಿತಾ ರೂಢ ಸಿಪಿಐ( ಎಂ)  ಅವರಿಗೆ ಪ್ರತಿಯಾಗಿ ನಡೆದುಕೊಳ್ಳುತ್ತಿದೆ.
ಈ ಬೆಳವಣಿಗೆ ಪ್ರತಿಭಟನೆ ಸ್ಥಳೀಯ ಮಟ್ಟಕ್ಕೂ ವ್ಯಾಪಿಸುವ ಭೀತಿಯಲ್ಲಿದ್ದಾರೆ ಪೊಲೀಸರು.ಆದಾಗ್ಯೂ, ಉಭಯ ಪಕ್ಷಗಳ ನಡುವೆ ಯಾವುದೇ ಹಿಂಸಾಚಾರ ಪ್ರಕರಣಗಳು ವರದಿಯಾಗಿಲ್ಲ. ಶಬರಿಮಲೆ ವಿವಾದಕ್ಕೆ ಸಂಬಂಧಿಸಿದಂತೆ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT