ಸಂಗ್ರಹ ಚಿತ್ರ 
ದೇಶ

ನಾಗರಹಾವಿನ ಆರ್ಶಿರ್ವಾದ: 5 ತಿಂಗಳ ಮಗುವನ್ನು ಕಚ್ಚಿ ಸಾಯಿಸಿದ ವಿಷಸರ್ಪ!

ನಾಗದೇವನ ಆಶೀರ್ವಾದ ಪಡೆಯಬೇಕೆಂದು ದಂಪತಿ ಮಗುವನ್ನು ಹಾವಾಡಿಗ ಸುಪರ್ದೀಗೆ ನೀಡಿದ್ದು ಈ ವೇಳೆ ವಿಷಪೂರಿತ ನಾಗರಹಾವು ಕಚ್ಚಿದ್ದರಿಂದ 5 ತಿಂಗಳ ಮಗು...

ರಾಯಪುರ: ನಾಗದೇವನ ಆಶೀರ್ವಾದ ಪಡೆಯಬೇಕೆಂದು ದಂಪತಿ ಮಗುವನ್ನು ಹಾವಾಡಿಗ ಸುಪರ್ದೀಗೆ ನೀಡಿದ್ದು ಈ ವೇಳೆ ವಿಷಪೂರಿತ ನಾಗರಹಾವು ಕಚ್ಚಿದ್ದರಿಂದ 5 ತಿಂಗಳ ಮಗು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಛತ್ತೀಸ್ ಗಢದಲ್ಲಿ ನಡೆದಿದೆ. 
ಮಗು ಪದೇ ಪದೇ ಅನಾರೋಗ್ಯಕ್ಕೀಡಾಗುತ್ತಿದ್ದು ಇದರಿಂದ ದಂಪತಿಗಳು ನೊಂದಿದ್ದರು. ಈ ಇದೇ ಹಾವಾಡಿಗನೊಬ್ಬ ನಾಗರ ದೇವನ ಆಚರಣೆ ಮಾಡಿದರೆ ನಿಮ್ಮ ಮಗುವಿನ ಆರೋಗ್ಯ ಸುಧಾರಿಸುತ್ತದೆ ಎಂದು ಹೇಳಿದ್ದಾನೆ. ಅದಕ್ಕೆ ಪೋಷಕರು ತಲೆಯಾಡಿಸಿದ್ದಾರೆ. 
ಅದರಂತೆ ಹಾವಾಡಿಗ ಬಿಲ್ಲು ರಾಮ್ ಮಾರ್ಕಮ್ ನಾಗರಪೂಜೆಯನ್ನು ಆಯೋಜಿಸಿದ್ದ. ಧಾರ್ಮಿಕ ವಿಧಿವಿಧಾನ ನಡೆಸುತ್ತಿದ್ದಾಗ ಹಾವು ಮಗುವಿಗೆ ಕಚ್ಚಿದೆ. ಈ ವೇಳೆ ಹಾವಾಡಿಗ ಹಾವಿನ ವಿಷದ ಹಲ್ಲು ಕಿತ್ತುಹಾಕಲಾಗಿದೆ ಎಂದು ಹೇಳಿದ್ದಾನೆ. ಇದನ್ನು ನಂಬಿದ ದಂಪತಿಗಳು ಪೂಜೆಯಲ್ಲಿ ನಿರತರಾಗಿದ್ದಾರೆ. ಎರಡು ಗಂಟೆ ನಂತರ ಮಗುವಿನ ಉಸಿರಾಟ ಕ್ಷೀಣಿಸುತ್ತಿರುವುದನ್ನು ಕಂಡ ಪೋಷಕರು ಕೂಡಲೇ ಮಗುವನ್ನು ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಅಷ್ಟರಲ್ಲೇ ವಿಷ ಮಗುವಿನ ದೇಹಕ್ಕೆ ಸಂಪೂರ್ಣವಾಗಿ ವ್ಯಾಪಸಿ ಕೊನೆಯುಸಿರೆಳೆದಿದೆ. 
ಈ ಘಟನೆ ನಂತರ ಸ್ಥಳೀಯರು ಬಿಲ್ಲು ರಾಮ್ ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT