ಪ್ರತಿಭಟನಾಕಾರರನ್ನು ಬಂಧಿಸುತ್ತಿರುವುದು
ತಿರುವನಂತಪುರಂ: ಶಬರಿಮಲೆಗೆ ಮಹಿಳೆಯರ ಪ್ರವೇಶ ವಿವಾದ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಭಕ್ತರಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಅಯ್ಯಪ್ಪಸ್ವಾಮಿ ದೇಗುಲದ ಮಾಜಿ ಮುಖ್ಯ ಅರ್ಚಕರ ಮೊಮ್ಮಗ ರಾಹುಲ್ ಈಶ್ವರ್ ಅವರನ್ನು ಕೇರಳ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ 10 ರಿಂದ 50 ವರ್ಷದ ಮಹಿಳೆಯರ ಪ್ರವೇಶ ವಿರೋಧಿಸಿ ಸಾವಿರಾರು ಭಕ್ತರು ಪಂಪ ನದಿ ತೀರದಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಇದುವರೆಗೆ ಪೊಲೀಸರು 30 ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ.
ಬಂಧಿತ 30 ಪ್ರತಿಭಟನಾಕಾರರ ಪೈಕಿ ಮೂವರಿಗೆ ಜಾಮೀನು ದೊರೆತಿದೆ.
ಐದು ದಿನಗಳ ತುಲ ಪೂಜೆ ಮುಕ್ತಾಯದ ನಂತರ ದೇವಸ್ಥಾನ ಬಂದ್ ಆಗುವವರೆಗೂ ನಿಳಕ್ಕಲ್ ನಲ್ಲಿ ಪ್ರತಿಭಟನೆ ಮುಂದುವರೆಸುವುದಾಗಿ ಹಿಂದೂ ಐಕ್ಯ ವೇದಿಕೆ ತಿಳಿಸಿದೆ.