ಗುಲಾಂ ನಬಿ ಆಜಾದ್ 
ದೇಶ

ಬಿಜೆಪಿಯಿಂದಾಗಿ ಹಿಂದೂ ಸಹೋದರರು ನನ್ನನ್ನು ಪ್ರಚಾರಕ್ಕೆ ಕರೆಯುತ್ತಿಲ್ಲ: ಗುಲಾಂ ನಬಿ ಆಜಾದ್

ಈ ಮೊದಲು ಹೆಚ್ಚಿನ ಸಂಖ್ಯೆಯ ಹಿಂದೂ ನಾಯಕರು ನನ್ನನ್ನು ಚುನಾವಣಾ ಪ್ರಚಾರಕ್ಕಾಗಿ ಕರೆಯುತ್ತಿದ್ದರು. ಆದರೆ ಈಗ ಅವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ..

ಲಕ್ನೋ: ಈ ಮೊದಲು ಹೆಚ್ಚಿನ ಸಂಖ್ಯೆಯ ಹಿಂದೂ ನಾಯಕರು ನನ್ನನ್ನು ಚುನಾವಣಾ ಪ್ರಚಾರಕ್ಕಾಗಿ ಕರೆಯುತ್ತಿದ್ದರು. ಆದರೆ ಈಗ ಅವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಹೇಳಿದ್ದಾರೆ,
ತಾವು ಯುವ ನಾಯಕರಾಗಿದ್ದಾಗಿಂದಲೂ ದೇಶಾದ್ಯಂತ ಪಕ್ಷದ  ಹಲವು ನಾಯಕರ ಪರವಾಗಿ ನಾನು ಪ್ರಚಾರ ಮಾಡಿದ್ದೇನೆ, ಅದರಲ್ಲಿ ಹಿಂದೂ ನಾಯಕರುಗಳು ಇದ್ದರು. ನಾನು ಯೂತ್ ಕಾಂಗ್ರೆಸ್ ನಾಯಕನಾದಾಗಿನಿಂದ, ಅಡಮಾನ್ ನಿಕೋಬಾರ್, ಸೇರಿ ದೇಶದ ಹಲವು ಭಾಗಗಳಲ್ಲಿ ಪ್ರಚಾರ ಕಾರ್ಯಕ್ರಮ ಮಾಡಿದ್ದೇನೆ, ಅದರಲ್ಲಿ ಶೇ. 95 ರಷ್ಟು ಹಿಂದುಗಳಿದ್ದರು, ಕೇವಲ ಶೇ,5 ರಷ್ಟು ಮಾತ್ರ ಮುಸ್ಲಿಂ ನಾಯಕರುಗಳಿದ್ದರು ಎಂದು ಹೇಳಿದ್ದಾರೆ,
ಆದರೆ ಕಳೆದ 4 ವರ್ಷಗಳಿಂದ ನಾನು ಅಂಕಿ ಅಂಶಗಳನ್ನು ಗಮನಿಸಿದ್ದೇನೆ,  ಎಲ್ಲೋ ಕೆಲವು ಕಡೆ ತಪ್ಪಾಗಿದೆ, ಇಂದಿನ ದಿನಗಳಲ್ಲಿ ಜನ ನನ್ನನ್ನು ಪ್ರಚಾರಕ್ಕೆ ಕರೆಯಲು ಹಿಂದು ಮುಂದು ನೋಡುತ್ತಾರೆ.ಅವರ ವೋಟ್ ಬ್ಯಾಂಕ್  ಮೇಲೆ ಪರಿಣಾಮ ಬೀರುತ್ತದೆ ಎಂಬ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ ಎಂದು ಹೇಳಿದ್ದಾರೆ.
ಕಳೆದ ನಾಲ್ಕು ವರ್ಷಗಳಿಂದ ಜನರಲ್ಲಿ ಬಿಜೆಪಿ ಮೈಂಡ್ ಸೆಟ್ ಬದಲಾಯಿಸಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಕ್ಷಣಾ, ಭದ್ರತಾ ಒಪ್ಪಂದ ಬಲವರ್ಧನೆ: ಭಾರತ- ಜರ್ಮನಿ ಮಹತ್ವದ ಕ್ರಮಗಳ ಘೋಷಣೆ!

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

'ಅಜ್ಮೀರ್' ದರ್ಗಾ ಶಿವ ದೇಗುಲವಾಗಿತ್ತು: ಕೋರ್ಟ್ ಮೆಟ್ಟಿಲೇರಿದ ವಿವಾದ!

'ವಿಬಿ-ಜಿ-ರಾಮ್' ಕಾಯ್ದೆ ವಿರುದ್ಧ ಕಾನೂನು ಸಮರ: ವಿಶೇಷ ಅಧಿವೇಶನ ಕರೆದು ಚರ್ಚೆ- ಸಿಎಂ ಸಿದ್ದರಾಮಯ್ಯ

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT