ದೇಶ

ಭೀಮಾ ಕೊರೆಗಾಂವ್ ಪ್ರಕರಣ: ಎಫ್ಐಆರ್ ರದ್ದು ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಗೌತಮ್ ನವ್ಲಾಖಾ

ಭೀಮಾ ಕೊರೆಗಾಂವ್ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ನ್ನು ರದ್ದುಗೊಳಿಸುವಂತೆ ಕೋರಿ ಬಾಂಬೆ ಹೈಕೋರ್ಟ್

ಮುಂಬೈ: ಭೀಮಾ ಕೊರೆಗಾಂವ್ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ನ್ನು ರದ್ದುಗೊಳಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ. 
ಪುಣೆ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ನ್ನು ಪ್ರಶ್ನಿಸಿರುವ ಗೌತಮ್ ನವ್ಲಾಖಾ, ತಮ್ಮ ವಿರುದ್ಧ ಮುಂಬೈ ಪೊಲೀಸರು ಮಾಡಿರುವ ಆರೋಪಗಳಿಗೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಅರ್ಜಿಯಲ್ಲಿ ಸಮರ್ಥಿಸಿಕೊಂಡಿದ್ದಾರೆ. 
ಅ.19 ರಂದು ಗೌತಮ್ ನವ್ಲಾಖಾ ಅರ್ಜಿಯನ್ನು ಮುಂಬೈ ಹೈ ಕೋರ್ಟ್ ನ ನ್ಯಾಯಮೂರ್ತಿಗಳಾದ ರಂಜಿತ್ ಮೋರೆ ಹಾಗೂ ಭಾರ್ತಿ ದಂಗ್ರೆ ವಿಚಾರಣೆ ನಡೆಸಲಿದ್ದಾರೆ. ಮಾವೋವಾದಿಗಳೊಂದಿಗೆ ನಂಟು ಹೊಂದಿದ್ದಾರೆ ಎಂಬ ಆರೋಪದಡಿ  ಗೌತಮ್ ನವ್ಲಾಖಾ, ಆಂಧ್ರದ ಸಾಹಿತಿ ವರವರ ರಾವ್ ಸೇರಿ ಒಟ್ಟು 5 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ದೆಹಲಿ ಹೈಕೋರ್ಟ್ ಈ ತಿಂಗಳ ಪ್ರಾರಂಭದಲ್ಲಿ ಬಂಧಿತರನ್ನು ಗೃಹಬಂಧನದಿಂದ ಮುಕ್ತಗೊಳಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT