ದೇಶ

ಭೀಮಾ ಕೊರೆಗಾಂವ್ ಪ್ರಕರಣ: ಎಫ್ಐಆರ್ ರದ್ದು ಕೋರಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ಗೌತಮ್ ನವ್ಲಾಖಾ

ಭೀಮಾ ಕೊರೆಗಾಂವ್ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ನ್ನು ರದ್ದುಗೊಳಿಸುವಂತೆ ಕೋರಿ ಬಾಂಬೆ ಹೈಕೋರ್ಟ್

ಮುಂಬೈ: ಭೀಮಾ ಕೊರೆಗಾಂವ್ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತ ಗೌತಮ್ ನವ್ಲಾಖಾ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ನ್ನು ರದ್ದುಗೊಳಿಸುವಂತೆ ಕೋರಿ ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ. 
ಪುಣೆ ಪೊಲೀಸರು ತಮ್ಮ ವಿರುದ್ಧ ದಾಖಲಿಸಿರುವ ಎಫ್ಐಆರ್ ನ್ನು ಪ್ರಶ್ನಿಸಿರುವ ಗೌತಮ್ ನವ್ಲಾಖಾ, ತಮ್ಮ ವಿರುದ್ಧ ಮುಂಬೈ ಪೊಲೀಸರು ಮಾಡಿರುವ ಆರೋಪಗಳಿಗೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಅರ್ಜಿಯಲ್ಲಿ ಸಮರ್ಥಿಸಿಕೊಂಡಿದ್ದಾರೆ. 
ಅ.19 ರಂದು ಗೌತಮ್ ನವ್ಲಾಖಾ ಅರ್ಜಿಯನ್ನು ಮುಂಬೈ ಹೈ ಕೋರ್ಟ್ ನ ನ್ಯಾಯಮೂರ್ತಿಗಳಾದ ರಂಜಿತ್ ಮೋರೆ ಹಾಗೂ ಭಾರ್ತಿ ದಂಗ್ರೆ ವಿಚಾರಣೆ ನಡೆಸಲಿದ್ದಾರೆ. ಮಾವೋವಾದಿಗಳೊಂದಿಗೆ ನಂಟು ಹೊಂದಿದ್ದಾರೆ ಎಂಬ ಆರೋಪದಡಿ  ಗೌತಮ್ ನವ್ಲಾಖಾ, ಆಂಧ್ರದ ಸಾಹಿತಿ ವರವರ ರಾವ್ ಸೇರಿ ಒಟ್ಟು 5 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದರು. ದೆಹಲಿ ಹೈಕೋರ್ಟ್ ಈ ತಿಂಗಳ ಪ್ರಾರಂಭದಲ್ಲಿ ಬಂಧಿತರನ್ನು ಗೃಹಬಂಧನದಿಂದ ಮುಕ್ತಗೊಳಿಸಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಾಸಗಿ ಫೋನ್ ಕಂಪನಿಯ ಉದ್ಯೋಗಸ್ಥರು ವಾರ್ಷಿಕ ಸಭೆಗೆಂದು ವಿಯೆಟ್ನಾಂಗೆ ತೆರಳಿದ್ದಾಗ ದುರಂತ: ಪ್ರಧಾನಿ ಮೋದಿ ಸಂತಾಪ

ಬಾಗಲಕೋಟೆ: ಕಬ್ಬಿನ ಗದ್ದೆಯಲ್ಲಿ ಮಹಿಳೆ ಶವವಾಗಿ ಪತ್ತೆ! ಅಕ್ರಮ ಸಂಬಂಧಕ್ಕೆ ಬಲಿಯಾದ್ಲಾ ವಿವಾಹಿತೆ?

HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್