ಸಂಗ್ರಹ ಚಿತ್ರ 
ದೇಶ

ತಿತ್ಲಿ ಚಂಡಮಾರುತಕ್ಕೆ ಮಗಳು ಬಲಿ, ಕರುಳ ಕುಡಿ ಕೊಳೆತ ಶವ ಹೊತ್ತು 8 ಕಿ.ಮೀ ಸಾಗಿದ ತಂದೆ!

ತಿತ್ಲಿ ಚಂಡಮಾರುತದ ಹೊಡೆತಕ್ಕೆ ಆಂಧ್ರ ಪ್ರದೇಶ ಹಾಗೂ ಒಡಿಶಾ ತತ್ತರಿಸಿತ್ತು. ಇದೀಗ ತಿತ್ಲಿ ಅಬ್ಬರ ಕಡಿಮೆಯಾದ ಬೆನ್ನಲ್ಲೇ ಮನಕಲಕುವ ಘಟನೆಯೊಂದು ಒಡಿಶಾದ ಗಜಪತಿ ಜಿಲ್ಲೆಯಲ್ಲಿ ನಡೆದಿದೆ...

ಗಜಪತಿ(ಒಡಿಶಾ): ತಿತ್ಲಿ ಚಂಡಮಾರುತದ ಹೊಡೆತಕ್ಕೆ ಆಂಧ್ರ ಪ್ರದೇಶ ಹಾಗೂ ಒಡಿಶಾ ತತ್ತರಿಸಿತ್ತು. ಇದೀಗ ತಿತ್ಲಿ ಅಬ್ಬರ ಕಡಿಮೆಯಾದ ಬೆನ್ನಲ್ಲೇ ಮನಕಲಕುವ ಘಟನೆಯೊಂದು ಒಡಿಶಾದ ಗಜಪತಿ ಜಿಲ್ಲೆಯಲ್ಲಿ ನಡೆದಿದೆ. 
ತಿತ್ಲಿ ಚಂಡಮಾರುತದ ಪರಿಣಾಮ ಸೃಷ್ಟಿಯಾಗಿದ್ದ ಪ್ರವಾಹದಲ್ಲಿ ಅಟಂಕ್ ಪುರ ಗ್ರಾಮದ ಮುಕುಂದ್ ದೋರಾ ಎಂಬುವರ ಎಂಟು ವರ್ಷದ ಮಗಳು ಬಬಿತಾ ಕೊಚ್ಚಿ ಹೋಗಿದ್ದಳು. 
ಎಂಟು ದಿನಗಳ ಸತತ ಹುಡುಕಾಟದ ಬಳಿಕ ಬಬಿತಾ ಶವ ಪತ್ತೆಯಾಗಿತ್ತು. ಮಗಳ ಕೊಳೆತ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ತಂದೆ ಮುಕುಂದ್ ಎಂಟು ಕಿ.ಮೀ ದೂರದವರೆಗೆ ತಮ್ಮ ಹೆಗಲ ಮೇಲೆ ಹೊತ್ತು ಸಾಗಿದ್ದು ಈ ದೃಶ್ಯ ಅಲ್ಲಿನ ಗ್ರಾಮಸ್ಥರನ್ನು ಮೂಕರನ್ನಾಗಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT