ಪ್ರಧಾನಿಯ ಸ್ವಜನ ಪಕ್ಷಪಾತದಿಂದ ಐಎಎಫ್ ಪೈಲಟ್ ಗಳಿಗೆ ಸಂಕಷ್ಟ: ರಾಹುಲ್ ಗಾಂಧಿ 
ದೇಶ

ಪ್ರಧಾನಿಯ ಸ್ವಜನ ಪಕ್ಷಪಾತದಿಂದ ಐಎಎಫ್ ಪೈಲಟ್ ಗಳಿಗೆ ಸಂಕಷ್ಟ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದಿದ್ದ ರಕ್ಷಣಾ ಒಪ್ಪಂದಗಳನ್ನು ಮರುಪರಿಶೀಲನೆ ಮಾಡುವುದರತ್ತ ಹೆಚ್ಚು ಗಮನ ನೀಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆದಿದ್ದ ರಕ್ಷಣಾ ಒಪ್ಪಂದಗಳನ್ನು ಮರುಪರಿಶೀಲನೆ ಮಾಡುವುದರತ್ತ ಹೆಚ್ಚು ಗಮನ ನೀಡುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ. 
ಯುಪಿಎ ಸರ್ಕಾರದ ಅವಧಿಯಲ್ಲಿ ಒಂದು ಹಂತಕ್ಕೆ ಬಂದು ನಿಂತಿದ್ದ ರಕ್ಷಣಾ ಒಪ್ಪಂದಗಳನ್ನು ಪ್ರಧಾನಿ ಮೋದಿ ಸರ್ಕಾರ ಅಂತಿಮಗೊಳಿಸುವುದರ ಬದಲಾಗಿ ಮರುಪರಿಶೀಲನೆ ಮಾಡಲು ಪ್ರಾರಂಭಿಸುತ್ತಿದೆ.  ರಕ್ಷಣಾ ಒಪ್ಪಂದಗಳು ಶೀಘ್ರವೇ ಅಂತಿಮಗೊಳ್ಳದೇ ಹಳೆಯ ಯುದ್ಧ ವಿಮನಗಳನ್ನು ಅನಿವಾರ್ಯವಾಗಿ ಓಡಿಸುತ್ತಿರುವ ಪೈಲಟ್ ಗಳ ಜೀವವನ್ನು ಮೋದಿ ಸರ್ಕಾರ ಅಪಾಯಕ್ಕೆ ದೂಡುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. 
ಮೋದಿ ಸರ್ಕಾರ ಸ್ವಜನ ಪಕ್ಷಪಾತದಿಂದಾಗಿ ಯುಪಿಎ ಸರ್ಕಾರದ ಅವಧಿಯಲ್ಲಿ ಒಂದು ಹಂತಕ್ಕೆ ಬಂದಿದ್ದ ರಕ್ಷಣಾ ಒಪ್ಪಂದಗಳನ್ನು ಅಂತಿಮಗೊಳಿಸುತ್ತಿಲ್ಲ. ಇದರಿಂದಾಗಿ ಪೈಲಟ್ ಗಳ ಜೀವಕ್ಕೆ ಅಪಾಯ ಎದುರಾಗುತ್ತಿದೆ ಎಂದು ರಾಹುಲ್ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ. ಶಿವಕುಮಾರ್: ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT