ದೇಶ

93 ನೇ ಜನ್ಮದಿನದಂದೇ ಕೊನೆಯುಸಿರೆಳೆದ ಕಾಂಗ್ರೆಸ್ ನಾಯಕ ಎನ್ ಡಿ ತಿವಾರಿ

Srinivas Rao BV
ನವದೆಹಲಿ: ದೀರ್ಘಾವಧಿಯ ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರಾಖಂಡ್ ಹಾಗೂ ಉತ್ತರ ಪ್ರದೇಶದ ಮಾಜಿ ಸಿಎಂ ಎನ್ ಡಿ ತಿವಾರಿ ತಮ್ಮ 93 ನೇ ಜನ್ಮದಿನದಂದೇ ಕೊನೆಯುಸಿರೆಳೆದಿದ್ದಾರೆ. 
ಪತ್ನಿ ಉಜ್ವಲಾ ಹಾಗೂ ಪುತ್ರ ರೋಹಿತ್ ಶೇಖರ್ ನ್ನು ಎನ್ ಡಿ ತಿವಾರಿ ಅಗಲಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಜುಲೈ ನಲ್ಲಿ ಐಸಿಯುಗೆ ದಾಖಲಿಸಲಾಗಿತ್ತು.  ಕಳೆದ ಕೆಲವು ತಿಂಗಳುಗಳಿಂದ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು. 
ಎನ್ ಡಿ ತಿವಾರಿ ಆಂಧ್ರಪ್ರದೇಶದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು. 
SCROLL FOR NEXT