ಎನ್ ಡಿಟಿವಿ ಮುಖ್ಯಸ್ಥ ಪ್ರಣಯ್ ರಾಯ್ (ಸಂಗ್ರಹ ಚಿತ್ರ) 
ದೇಶ

ಫೆಮಾ ನಿಯಮ ಉಲ್ಲಂಘನೆ: ಎನ್ ಡಿಟಿವಿಗೆ ಜಾರಿನಿರ್ದೇಶನಾಲಯ ನೋಟಿಸ್

ರಾಫೆಲ್ ಕುರಿತು ವರದಿ ಬಿತ್ತರಿಸಿ ಅನಿಲ್ ಅಂಬಾನಿಯಿಂದ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಎನ್ ಡಿವಿಗೆ ಇದೀಗ ಜಾರಿ ನಿರ್ದೇಶನಾಲಯ ಕೂಡ ಶಾಕ್ ನೀಡಿದ್ದು, ಫೆಮಾ ನಿಯಮ ಉಲ್ಲಂಘನೆ ಆರೋಪದಡಿಯಲ್ಲಿ ಜಾರಿನಿರ್ದೇಶನಾಲಯ ನೋಟಿಸ್ ನೀಡಲಾಗಿದೆ.

ನವದೆಹಲಿ: ರಾಫೆಲ್ ಕುರಿತು ವರದಿ ಬಿತ್ತರಿಸಿ ಅನಿಲ್ ಅಂಬಾನಿಯಿಂದ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಎನ್ ಡಿಟಿವಿಗೆ ಇದೀಗ ಜಾರಿ ನಿರ್ದೇಶನಾಲಯ ಕೂಡ ಶಾಕ್ ನೀಡಿದ್ದು, ಫೆಮಾ ನಿಯಮ ಉಲ್ಲಂಘನೆ ಆರೋಪದಡಿಯಲ್ಲಿ ಜಾರಿನಿರ್ದೇಶನಾಲಯ ನೋಟಿಸ್ ನೀಡಲಾಗಿದೆ.
ಮೂಲಗಳ ಪ್ರಕಾರ ಸುಮಾರು ನಾಲ್ಕು ಸಾವಿರ ಕೋಟಿ ರೂಪಾಯಿ ಮೊತ್ತದ ವಿದೇಶಿ ವಿನಿಮಯವನ್ನು ಕಾನೂನು ಬಾಹಿರವಾಗಿ ನಡೆಸಲಾಗಿದೆ ಎಂಬ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯ ಖಾಸಗಿ ಸುದ್ದಿವಾಹಿನಿಯಾದ ಎನ್ ಡಿಟಿವಿಗೆ ಶೋಕಾಸ್ ನೋಟಿಸ್ ನೀಡಿದೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ನೀಡಿರುವ ಜಾರಿ ನಿರ್ದೇಶನಾಲಯ, 'ಎನ್‌ಡಿಟಿವಿ ಸ್ವೀಕರಿಸಿರುವ ಸುಮಾರು 1637 ಕೋಟಿ ರೂಪಾಯಿ ವಿದೇಶಿ ನೇರ ಹೂಡಿಕೆಯಲ್ಲಿ ವಿದೇಶಿ ವಿನಿಮಯ ಕಾಯ್ದೆಯನ್ನು ಉಲ್ಲಂಘಿಸಿರುವುದು ತನಿಖೆಯಿಂದ ತಿಳಿದುಬಂದಿದೆ. ಜತೆಗೆ 2732 ಕೋಟಿ ರೂಪಾಯಿ ಸಾಗರೋತ್ತರ ಹೂಡಿಕೆಗೆ ಸಂಬಂಧಿಸಿದಂತೆಯೂ ಕಾನೂನು ಉಲ್ಲಂಘನೆಯಾಗಿದೆ' ಎಂದು ಹೇಳಿದೆ.
ವಿದೇಶಿ ವಿನಿಮಯ ನಿರ್ವಹಣೆ ಕಾಯ್ದೆ (ಫೆಮಾ)ಯಡಿ ಎನ್ ಡಿಟಿವಿ ಸಂಸ್ಥೆಯ ಕಾರ್ಯನಿರ್ವಾಹಕ ಸಹ ಅಧ್ಯಕ್ಷರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್, ಪತ್ರಕರ್ತ ವಿಕ್ರಮ್ ಚಂದ್ರ ಸೇರಿದಂತೆ ಇತರ ಕೆಲವರಿಗೆ ನೋಟಿಸ್ ನೀಡಲಾಗಿದೆ ಎಂದು ತಿಳಿದುಬಂದಿದೆ.
ಮೆಸಸ್ ಎನ್‌ಡಿಟಿವಿ ಲೈಫ್‌ಸ್ಟೈಲ್ ಹೋಲ್ಡಿಂಗ್ಸ್ ಲಿಮಿಟೆಡ್ (ಈಗ ಮೆಸಸ್ ಲೈಫ್‌ಸ್ಟೈಲ್ ಆ್ಯಂಡ್ ಮೀಡಿಯಾ ಹೋಲ್ಡಿಂಗ್ಸ್ ಲಿಮಿಟೆಡ್), ಮೆಸಸ್ ಸೌತ್ ಏಷ್ಯಾ ಕ್ರಿಯೇಟಿವ್ ಅಸೆಟ್ಸ್ ಲಿಮಿಟೆಡ್, ಮೆಸಸ್ ಆಸ್ಟ್ರೊ ಓವರ್‌ಸೀಸ್ ಲಿಮಿಟೆಡ್ ಮತ್ತು ಮೆಸಸ್ ಎನ್‌ಡಿಟಿವಿ ಇಮೇಜಿನ್ ಲಿಮಿಟೆಡ್ (ಈಗ ಮೆಸಸ್ ಟರ್ನರ್ ಜನರಲ್ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್) ಕಂಪನಿಗಳು ಕಾಯ್ದೆ ಉಲ್ಲಂಘಿಸಿವೆ ಎಂದು ಆಪಾದಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT