ಕಾರ್ಯಕರ್ತೆ ರೆಹಾನಾ ಫಾತಿಮಾರ ಕೊಚ್ಚಿ ನಿವಾಸ 
ದೇಶ

ಶಬರಿಮಲೆ ಪ್ರವೇಶಕ್ಕೆ ಯತ್ನಿಸಿದ ಮಹಿಳಾ ಕಾರ್ಯಕರ್ತೆ ರೆಹಾನಾ ಫಾತಿಮಾ ಮನೆ ಮೇಲೆ ದಾಳಿ!

ಖ್ಯಾತ ಪವಿತ್ರ ಯಾತ್ರಾತಾಣ ಶಬರಿಮಲೆಗೆ ಪ್ರವೇಶ ಮಾಡಲು ಯತ್ನಿಸಿದ್ದ ಮಹಿಳಾ ಕಾರ್ಯಕರ್ತೆ ರೆಹಾನಾ ಫಾತಿಮಾ ಅವರ ಕೊಚ್ಚಿ ನಿವಾಸದ ಮೇಲೆ ದಾಳಿಯಾಗಿದ್ದು, ಮನೆಯ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ.

ಕೊಚ್ಚಿ: ಖ್ಯಾತ ಪವಿತ್ರ ಯಾತ್ರಾತಾಣ ಶಬರಿಮಲೆಗೆ ಪ್ರವೇಶ ಮಾಡಲು ಯತ್ನಿಸಿದ್ದ ಮಹಿಳಾ ಕಾರ್ಯಕರ್ತೆ ರೆಹಾನಾ ಫಾತಿಮಾ ಅವರ ಕೊಚ್ಚಿ ನಿವಾಸದ ಮೇಲೆ ದಾಳಿಯಾಗಿದ್ದು, ಮನೆಯ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ.
ಅತ್ತ ರೆಹಾನಾ ಫಾತಿಮಾ ಶಬರಿಮಲೆ ಗುಡ್ಡ ಹತ್ತುತ್ತಿದ್ದಂತೆಯೇ ಇತ್ತ ಆಕ್ರೋಶಿತ ಗುಂಪೊಂದು ಕೊಚ್ಚಿಯಲ್ಲಿ ಆಕೆಯ ಮನೆಯನ್ನು ಧ್ವಂಸಗೊಳಿಸಿದೆ. ಪೊಲೀಸರ ಮಧ್ಯ ಪ್ರವೇಶದ ಬಳಿಕ ಉದ್ರಿಕ್ತ ಗುಂಪು ಚದುರಿದ್ದು, ಪ್ರಸ್ತುತ ರೆಹಾನಾ ಫಾತಿಮಾ ಅವರ ಮನೆಯ ಬಳಿ ಪೊಲೀಸ್ ಜೀಪೊಂದು ಮೊಕ್ಕಾಂ ಹೂಡಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಇನ್ನು ಶುಕ್ರವಾರ 300 ಮಂದಿ ಸೇನಾ ಸಿಬ್ಬಂದಿ ನಡುವೆ ಹೆಲ್ಮೆಟ್ ಧರಿಸಿ ಹೆಚ್ಚಿನ ಭದ್ರತಾ ಕ್ರಮಗಳನ್ನು ತೆಗೆದುಕೊಂಡು ರೆಹನಾ ಫಾತಿಮಾ ಹಾಗೂ ಆಂಧ್ರ ಪ್ರದೇಶ ಮೂಲಕ ಮಹಿಳಾ ಪತ್ರಕರ್ತೆ ಶಬರಿಮಲೆಗೆ ತೆರಳಿದ್ದರು. ಆದರೆ ಸನ್ನಿಧಾನಂಗೆ ಸಮೀಪದಲ್ಲಿರುವ ವಳಿಯ ನದಪ್ಪಂಧಲ್ ನಲ್ಲಿಯೇ ಪ್ರತಿಭಟನಾಕಾರರು ಅವರನ್ನು ತಡೆದಿದ್ದಾರೆ. ಈ ವೇಳೆ ಕೇರಳ ಪೊಲೀಸ್ ವರಿಷ್ಠಾಧಿಕಾರಿಗಳು ಸಂಧಾನ ನಡೆಸಿದ್ದು, ಅಲ್ಲದೆ ಅಯ್ಯಪ್ಪ ಸ್ವಾಮಿ ದೇಗುಲದ ಪ್ರಧಾನಿ ಅರ್ಚಕರೂ ಕೂಡ ದೇಗುಲದ ಬಾಗಿಲು ಹಾಕಿ ಬಿಡುವುದಾಗಿ ಎಚ್ಚರಿಕೆ ನೀಡಿದ ಹಿನ್ನಲೆಯಲ್ಲಿ ಅವರನ್ನು ಶಬರಿಮಲೆಯಿಂದ ವಾಪಸ್ ಕಳುಹಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

SCROLL FOR NEXT