ಕಾರ್ಯಕರ್ತೆ ರೆಹಾನಾ ಫಾತಿಮಾರ ಕೊಚ್ಚಿ ನಿವಾಸ 
ದೇಶ

ಶಬರಿಮಲೆ ಪ್ರವೇಶಕ್ಕೆ ಯತ್ನಿಸಿದ ಮಹಿಳಾ ಕಾರ್ಯಕರ್ತೆ ರೆಹಾನಾ ಫಾತಿಮಾ ಮನೆ ಮೇಲೆ ದಾಳಿ!

ಖ್ಯಾತ ಪವಿತ್ರ ಯಾತ್ರಾತಾಣ ಶಬರಿಮಲೆಗೆ ಪ್ರವೇಶ ಮಾಡಲು ಯತ್ನಿಸಿದ್ದ ಮಹಿಳಾ ಕಾರ್ಯಕರ್ತೆ ರೆಹಾನಾ ಫಾತಿಮಾ ಅವರ ಕೊಚ್ಚಿ ನಿವಾಸದ ಮೇಲೆ ದಾಳಿಯಾಗಿದ್ದು, ಮನೆಯ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ.

ಕೊಚ್ಚಿ: ಖ್ಯಾತ ಪವಿತ್ರ ಯಾತ್ರಾತಾಣ ಶಬರಿಮಲೆಗೆ ಪ್ರವೇಶ ಮಾಡಲು ಯತ್ನಿಸಿದ್ದ ಮಹಿಳಾ ಕಾರ್ಯಕರ್ತೆ ರೆಹಾನಾ ಫಾತಿಮಾ ಅವರ ಕೊಚ್ಚಿ ನಿವಾಸದ ಮೇಲೆ ದಾಳಿಯಾಗಿದ್ದು, ಮನೆಯ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ.
ಅತ್ತ ರೆಹಾನಾ ಫಾತಿಮಾ ಶಬರಿಮಲೆ ಗುಡ್ಡ ಹತ್ತುತ್ತಿದ್ದಂತೆಯೇ ಇತ್ತ ಆಕ್ರೋಶಿತ ಗುಂಪೊಂದು ಕೊಚ್ಚಿಯಲ್ಲಿ ಆಕೆಯ ಮನೆಯನ್ನು ಧ್ವಂಸಗೊಳಿಸಿದೆ. ಪೊಲೀಸರ ಮಧ್ಯ ಪ್ರವೇಶದ ಬಳಿಕ ಉದ್ರಿಕ್ತ ಗುಂಪು ಚದುರಿದ್ದು, ಪ್ರಸ್ತುತ ರೆಹಾನಾ ಫಾತಿಮಾ ಅವರ ಮನೆಯ ಬಳಿ ಪೊಲೀಸ್ ಜೀಪೊಂದು ಮೊಕ್ಕಾಂ ಹೂಡಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
ಇನ್ನು ಶುಕ್ರವಾರ 300 ಮಂದಿ ಸೇನಾ ಸಿಬ್ಬಂದಿ ನಡುವೆ ಹೆಲ್ಮೆಟ್ ಧರಿಸಿ ಹೆಚ್ಚಿನ ಭದ್ರತಾ ಕ್ರಮಗಳನ್ನು ತೆಗೆದುಕೊಂಡು ರೆಹನಾ ಫಾತಿಮಾ ಹಾಗೂ ಆಂಧ್ರ ಪ್ರದೇಶ ಮೂಲಕ ಮಹಿಳಾ ಪತ್ರಕರ್ತೆ ಶಬರಿಮಲೆಗೆ ತೆರಳಿದ್ದರು. ಆದರೆ ಸನ್ನಿಧಾನಂಗೆ ಸಮೀಪದಲ್ಲಿರುವ ವಳಿಯ ನದಪ್ಪಂಧಲ್ ನಲ್ಲಿಯೇ ಪ್ರತಿಭಟನಾಕಾರರು ಅವರನ್ನು ತಡೆದಿದ್ದಾರೆ. ಈ ವೇಳೆ ಕೇರಳ ಪೊಲೀಸ್ ವರಿಷ್ಠಾಧಿಕಾರಿಗಳು ಸಂಧಾನ ನಡೆಸಿದ್ದು, ಅಲ್ಲದೆ ಅಯ್ಯಪ್ಪ ಸ್ವಾಮಿ ದೇಗುಲದ ಪ್ರಧಾನಿ ಅರ್ಚಕರೂ ಕೂಡ ದೇಗುಲದ ಬಾಗಿಲು ಹಾಕಿ ಬಿಡುವುದಾಗಿ ಎಚ್ಚರಿಕೆ ನೀಡಿದ ಹಿನ್ನಲೆಯಲ್ಲಿ ಅವರನ್ನು ಶಬರಿಮಲೆಯಿಂದ ವಾಪಸ್ ಕಳುಹಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

Vijay Hazare Trophy: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಕರ್ನಾಟಕ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

UP ದಲಿತ ಮಹಿಳೆ ಕೊಲೆ: ಯೋಗಿ ಸರ್ಕಾರ ಜಾತಿ, ಧರ್ಮದ ಆಧಾರದಲ್ಲಿ ದ್ವೇಷಕ್ಕೆ ಪ್ರಚೋದನೆ- ಕಾಂಗ್ರೆಸ್ ಕಿಡಿ!

SCROLL FOR NEXT