ದೇಶ

2014 ರಂತೆ ಈ ಬಾರಿ ಯಾವ ಅಲೆಯೂ ಇರುವುದಿಲ್ಲ: ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ

Manjula VN
ಮುಂಬೈ: ಬಿಜೆಪಿ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯವರು ತೀವ್ರವಾಗಿ ಕಿಡಿಕಾರಿದ್ದು, 2014ರಂತೆ ಈ ಬಾರಿ ಯಾವುದೇ ಅಲೆಗಳೂ ಇರುವುದಿಲ್ಲ ಎಂದು ಗುರುವಾರ ಹೇಳಿದ್ದಾರೆ. 
ಮುಂಬೈನಲ್ಲಿ ನಡೆದ ವಾರ್ಷಿಕ ವಿಜಯದಶಮಿ ಆಚರಣೆ ಸಮಾರಂಭದಲ್ಲಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿರುವ ಅವರು, 2014ರಂತೆ ಈ ಬಾರಿ ಯಾವುದೇ ಅಲೆಗಳೂ ಇರುವುದಿಲ್ಲ. 2014ರಂತೆಯೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. 
ಇದೇ ವೇಳೆ ಬಿಜೆಪಿ ವಿರುದ್ಧ ಕಿಡಿಕಾರಿದ ಅವರು, ಶನಿ ಹಾಗೂ ಮಂಗಳ ದೇಶದ ಭವಿಷ್ಯಕ್ಕೆ ಕಂಟಕವಾಗಿದೆ. ನಾನು ಯಾರ ಬಗ್ಗೆ ಮಾತನಾಡುತ್ತಿದ್ದೇನೆಂಬುದು ನಿಮಗೆ ಗೊತ್ತಿರಬಹುದು ಎಂದು ತಿಳಿಸಿದ್ದಾರೆ. 
SCROLL FOR NEXT