ನಾವು ಕಾನೂನು ಪಾಲನೆ ಮಾಡುತ್ತಿದ್ದೇವೆ, ಅಹಿತಕರ ವಾತಾವರಣವನ್ನು ಸೃಷ್ಟಿ ಮಾಡುತ್ತಿಲ್ಲ: ಕೇರಳ ಪೊಲೀಸ್ 
ದೇಶ

ಕಾನೂನಷ್ಟೇ ಪಾಲನೆ ಮಾಡುತ್ತಿದ್ದೇವೆ, ಅಹಿತಕರ ವಾತಾವರಣ ಸೃಷ್ಟಿ ಮಾಡುವುದಿಲ್ಲ: ಕೇರಳ ಪೊಲೀಸ್

ಶಬರಿಮಲೆಯಲ್ಲಿ ಪೊಲೀಸರು ಅಹಿತಕರ ವಾತಾವರಣ ಸೃಷ್ಟಿ ಮಾಡುವುದಿಲ್ಲ. ಭಕ್ತಾದಿಗಳೊಂದಿಗೆ ಘರ್ಷಣೆಯುಂಟಾಗುವುದು ನಮಗಿಷ್ಟವಿಲ್ಲ. ನಾವು ಕಾನೂನಷ್ಟೇ ಪಾಲನೆ ಮಾಡುತ್ತಿದ್ದೇವೆಂದು ಕೇರಳ ಪೊಲೀಸರು ಶುಕ್ರವಾರ ಹೇಳಿದ್ದಾರೆ...

ತಿರುವನಂತಪುರ: ಶಬರಿಮಲೆಯಲ್ಲಿ ಪೊಲೀಸರು ಅಹಿತಕರ ವಾತಾವರಣ ಸೃಷ್ಟಿ ಮಾಡುವುದಿಲ್ಲ. ಭಕ್ತಾದಿಗಳೊಂದಿಗೆ ಘರ್ಷಣೆಯುಂಟಾಗುವುದು ನಮಗಿಷ್ಟವಿಲ್ಲ. ನಾವು ಕಾನೂನಷ್ಟೇ ಪಾಲನೆ ಮಾಡುತ್ತಿದ್ದೇವೆಂದು ಕೇರಳ ಪೊಲೀಸರು ಶುಕ್ರವಾರ ಹೇಳಿದ್ದಾರೆ. 
ಶಬರಿಮಲೆಯಲ್ಲಿ ಹಿಂಸಾಚಾರ ಹೆಚ್ಚಾಗಿರುವ ಹಿನ್ನಲೆಯಲ್ಲಿ ಭಕ್ತಾದಿಗಳೊಂದಿಗೆ ಮಾತುಕತೆ ನಡೆಸಿರುವ ಕೇರಳ ಐಜಿ ಎಸ್.ಶ್ರೀಜಿತ್ ಅವರು, ಶಬರಿಮಲೆಯಲ್ಲಿ ಪೊಲೀಸರು ಅಹಿತಕರ ವಾತಾವರಣ ಸೃಷ್ಟಿ ಮಾಡುವುದಿಲ್ಲ. ಭಕ್ತಾದಿಗಳೊಂದಿಗೆ ಘರ್ಷಣೆಯುಂಟಾಗುವುದು ನಮಗಿಷ್ಟವಿಲ್ಲ. ನಾವು ಕಾನೂನಷ್ಟೇ ಪಾಲನೆ ಮಾಡುತ್ತಿದ್ದೇವೆ. ಮಹಿಳೆಯರ ಪ್ರವೇಶ ಕುರಿತು ಉನ್ನತಾಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಸ್ಥಳದ ಪರಿಸ್ಥಿತಿ ಕುರಿತಂತೆ ಅವರಿಗೆ ವಿವರಣೆ ನೀಡುತ್ತಿದ್ದೇವೆಂದು ಹೇಳಿದ್ದಾರೆ. 
ಈ ನಡುವೆ ತೀವ್ರ ಪ್ರತಿಭಟನೆಗಳ ನಡುವೆಯೂ ಇಂದು ಓರ್ವ ಪತ್ರಕರ್ತೆ ಹಾಗೂ ಮತ್ತೋರ್ವ ಮಹಿಳೆ ಭಾರೀ ಭದ್ರತೆಯೊಂದಿಗೆ ಅಯ್ಯಪ್ಪನ ಸನ್ನಿಧಿಯತ್ತ ಹೆಜ್ಜೆ ಹಾಕುತ್ತಿದ್ದಾರೆ. 
ಬುಲೆಟ್ ಫ್ರೂಫ್ ಚಾಕೆಟ್ ಹಾಗೂ ಹೆಲ್ಮೆಟ್ ಧರಿಸಿರುವ ಮಹಿಳೆಯರು ಪೊಲೀಸರ ಸರ್ಪಗಾವಲೊಂದಿಗೆ ಅಯ್ಯಪ್ಪನ ದರ್ಶನಕ್ಕೆ ತೆರಳುತ್ತಿದ್ದಾರೆ. 
ದೇಶದ ಸರ್ವೋನ್ನತ ನ್ಯಾಯಾಲಯವು 10ರಿಂದ 50 ವರ್ಷ ವಯಸ್ಸಿನ ಮಹಿಳೆಯರಿಗೆ ಪ್ರವೇಶಕ್ಕೆ ಅವಕಾಶ ನೀಡಿತ್ತು. ಇದರಂತೆ ಸುಪ್ರೀಂಕೋರ್ಟ್ ಆದೇಶದ ಬಳಿಕ ಬುಧವಾರವಷ್ಟೇ ದೇಗುಲದ ಬಾಗಿಲನ್ನು ತೆರೆಯಲಾಗಿತ್ತು. ಆದರೆ, ದೇವಾಲಯಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳಲ್ಲಿ ಕಂಡು ಕೇಳರಿಯದ ರೀತಿಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT