ರಾಷ್ಟ್ರಪತಿ ರಾಮನಾಥ್ ಕೋವಿಂದ್ 
ದೇಶ

ಎಲ್ಲೆಡೆ ದಸರಾ ಸಂಭ್ರಮ: ನಾಡ ಜನತೆಗೆ ಕನ್ನಡದಲ್ಲಿಯೇ ಶುಭಾಶಯ ಕೋರಿದ ರಾಷ್ಟ್ರಪತಿ ಕೋವಿಂದ್

ನಾಡಿನೆಲ್ಲೆಡೆ ವಿಜಯದಶಮಿ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ...

ನವದೆಹಲಿ: ನಾಡಿನೆಲ್ಲೆಡೆ ವಿಜಯದಶಮಿ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. 
ಕನ್ನಡ ನಾಡಿನ ಜನತೆಗೆ ಕನ್ನಡದಲ್ಲಿಯೇ ಟ್ವೀಟ್ ಮಾಡುವ ಮೂಲಕ ಕೋವಿಂದ್ ಅವರು ವಿಜಯದಶಮಿ ಹಾಗೂ ನವರಾತ್ರಿಯ ಶುಭಾಶಯಗಳನ್ನು ಕೋರಿದ್ದಾರೆ. 
ವಿಜಯದಶಮಿ ಹಾಗೂ ದುರ್ಗಾಪೂಜೆಯ ಶುಭ ಸಂದರ್ಭದಲ್ಲಿ ದೇಶದ ಸಹ ನಾಗರೀಕರೆಲ್ಲ್ರಿಗೂ ದಸರಾ ಹಬ್ಬದ ಶುಭಾಶಯಗಳು. ದಸರಾ ಹಬ್ಬವು ಸಮಾಜದಲ್ಲಿನ ದುಷ್ಟಶಕ್ತಿಗಳ ಮೇಲೆ ಶಿಷ್ಟಶಕ್ತಿಗಳ ಗೆಲವಿನ ವಿಜಯೋತ್ಸವವಾಗಿದೆ. ದಸರಾ ಮಹೋತ್ಸವವು ನಮ್ಮೆಲ್ಲರ ಕುಟುಂಬದ ಸದಸ್ಯರೆಲ್ಲರಿಗೂ ಹಾಗೂ ನಮ್ಮ ಸಮಾಜದ ಎಲ್ಲಾ ವರ್ಗಗಳ ಸದಸ್ಯರಿಗೂ ಶುಭವನ್ನುಂಟು ಮಾಡಲಿ ಎಂದು ಹೇಳಿದ್ದಾರೆ.
ರಾಷ್ಟ್ರಪತಿಗಳು ಕನ್ನಡವಷ್ಟೇ ಅಲ್ಲದೆ, ಹಿಂದಿ ಹಾಗೂ ಇಂಗ್ಲೀಷ್, ತಮಿಳು, ಮಲೆಯಾಳಂ, ತೆಲುಗು ಸೇರಿ ಹಲವು  ಭಾಷೆಗಳಲ್ಲೂ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ರಾಷ್ಟ್ರಪತಿಗಳು ಕನ್ನಡದಲ್ಲಿಯೇ ಟ್ವೀಟ್ ಮಾಡಿ ಶುಭಾಶಯಗಳನ್ನು ಕೋರಿರುವ ಹಿನ್ನಲೆಯಲ್ಲಿ ಹಲವು ಕನ್ನಡಾಭಿಮಾನಿಗಳು ಹರ್ಷ ವ್ಯಕ್ತಪಡಿಸಿ, ಧನ್ಯವಾದಗಳನ್ನು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT