ಕೇರಳ ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್ 
ದೇಶ

'ಶಕ್ತಿ ಪ್ರದರ್ಶನಕ್ಕೆ ಇದು ವೇದಿಕೆಯಲ್ಲ, ಕಾನೂನು ಸುವ್ಯವಸ್ಥೆ ರಕ್ಷಣೆಯೇ ನಮಗೆ ಮುಖ್ಯ': ಕೇರಳ ಸಚಿವ

ಶಕ್ತಿ ಪ್ರದರ್ಶನಕ್ಕೆ ಇದು ವೇದಿಕೆಯಲ್ಲ, ಇಲ್ಲಿ ಯಾವುದೇ ರೀತಿಯ ಮೇಲುಗೈ ಸಾಧನೆ ಎಂಬುದಕ್ಕಿಂತ ಕಾನೂನು ಸುವ್ಯವಸ್ಥೆ ರಕ್ಷಣೆಯೇ ನಮಗೆ ಮುಖ್ಯ ಎಂದು ಕೇರಳ ಸಚಿವ ಕಡಕಂಪಲ್ಲಿ ಸುರೇಂದ್ರನ್ ಹೇಳಿದ್ದಾರೆ.

ತಿರುವನಂತಪುರಂ: ಶಕ್ತಿ ಪ್ರದರ್ಶನಕ್ಕೆ ಇದು ವೇದಿಕೆಯಲ್ಲ, ಇಲ್ಲಿ ಯಾವುದೇ ರೀತಿಯ ಮೇಲುಗೈ ಸಾಧನೆ ಎಂಬುದಕ್ಕಿಂತ ಕಾನೂನು ಸುವ್ಯವಸ್ಥೆ ರಕ್ಷಣೆಯೇ ನಮಗೆ ಮುಖ್ಯ ಎಂದು ಕೇರಳ ಸಚಿವ ಕಡಕಂಪಲ್ಲಿ ಸುರೇಂದ್ರನ್ ಹೇಳಿದ್ದಾರೆ.
ಪ್ರಸಿದ್ಧ ಪವಿತ್ರ ಯಾತ್ರಾ ತಾಣ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಇಬ್ಬರು ಮಹಿಳೆಯರು ಪೊಲೀಸ್ ಭದ್ರತೆಯಲ್ಲಿ ಪ್ರವೇಶ ಮಾಡುತ್ತಿರುವ ಕುರಿತು ಪ್ರತಿಕ್ರಿಯಿಸಿರುವ ಸಚಿವರು, ಓರ್ವ ಮಹಿಳಾ ಪತ್ರಕರ್ತೆ ಮತ್ತು ಓರ್ವ ಮಹಿಳಾ ಕಾರ್ಯಕರ್ತರು ಶಬರಿಮಲೆಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಅವರಿಗೆ ಸೂಕ್ತ ಭದ್ರತೆ ಕೂಡ ನೀಡಲಾಗಿದೆ. 
ಇಲ್ಲಿ ಯಾರ ಪ್ರತಿಷ್ಟೆಯ ಪ್ರಶ್ನೆಯೂ ಇಲ್ಲ. ಸುಪ್ರೀಂ ಕೋರ್ಟ್ ಆದೇಶದ ಪಾಲನೆ ಮತ್ತು ಅದರ ಜೊತೆ ಜೊತೆಗೇ ಕಾನೂನು ಸುವ್ಯವಸ್ಥೆ ಕೂಡ ಮುಖ್ಯ. ಶಾಂತಿ ಹಾಳಾಗುವುದು ನಮಗೆ ಬೇಕಿಲ್ಲ. ಮಹಿಳಾ ಶಕ್ತಿ ಪ್ರದರ್ಶನಕ್ಕೆ ಶಬರಿಮಲೆ ವೇದಿಕೆಯಾಗುವುದು ಸರಿಯಲ್ಲ. ಶಕ್ತಿ ಪ್ರದರ್ಶನಕ್ಕೆ ಇದು ಸೂಕ್ತ ಪರಿಸ್ಥಿತಿಯೂ ಅಲ್ಲ ಎಂದು ಸುರೇಂದ್ರನ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT