ರಾವಣ ದಹನದ ವೇಳೆ ಅಮೃತಸರದಲ್ಲಿ ಘೋರ ದುರಂತ: ಸಾವಿನ ಸಂಖ್ಯೆ 61ಕ್ಕೆ ಏರಿಕೆ 
ದೇಶ

ರಾವಣ ದಹನದ ವೇಳೆ ಅಮೃತಸರದಲ್ಲಿ ಘೋರ ದುರಂತ: ಸಾವಿನ ಸಂಖ್ಯೆ 61ಕ್ಕೆ ಏರಿಕೆ

ಪಂಜಾಬ್ ರಾಜ್ಯದ ಅಮೃತಸರ ಬಳಿ ಶುಕ್ರವಾರ ಸಂಜೆ ರಾವಣ ದಹನ ವೀಕ್ಷಿಸುತ್ತಿದ್ದವ ಮೇಲೆ ರೈಲು ಹರಿದು ದುರ್ಘಟನೆ ಸಂಭವಿಸಿದ್ದು, ಪ್ರಕರಣಕ್ಕೆ ಸಂಬಧಿಸಿದಂತೆ ಮೃತಪಟ್ಟವರ ಸಂಖ್ಯೆ ಇದೀಗ 61ಕ್ಕೆ...

ಅಮೃತಸರ: ಪಂಜಾಬ್ ರಾಜ್ಯದ ಅಮೃತಸರ ಬಳಿ ಶುಕ್ರವಾರ ಸಂಜೆ ರಾವಣ ದಹನ ವೀಕ್ಷಿಸುತ್ತಿದ್ದವ ಮೇಲೆ ರೈಲು ಹರಿದು ದುರ್ಘಟನೆ ಸಂಭವಿಸಿದ್ದು, ಪ್ರಕರಣಕ್ಕೆ ಸಂಬಧಿಸಿದಂತೆ ಮೃತಪಟ್ಟವರ ಸಂಖ್ಯೆ ಇದೀಗ 61ಕ್ಕೆ ಏರಿಕೆಯಾಗಿದೆ. 
ರೈಲ್ವೆ ಹಳಿ ಸಮೀಪದ ಮೈದಾನದಲ್ಲಿ ದಸರಾ ಪ್ರಯುಕ್ತ ರಾವಣ ದಹನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ರಾವಣನಿಗೆ ಬೆಂಕಿ ಹಚ್ಚಿ ಪಟಾಕಿ ಸಿಡಿಯಲು ಆರಂಭಿಸಿದಾಗ ದೂರದಲ್ಲಿ ನಿಂತಿದ್ದ ಜನ ರೈಲ್ವೆ ಹಳಿ ಬಳಿ ಬಂದಿದ್ದರು. ಈ ವೇಳೆ ಎರಡೂ ದಿಕ್ಕಿನಿಂದಲೂ ರೈಲೂ ವೇಗವಾಗಿ ಆಗಮಿಸಿದೆ. ಆದರೆ, ಪಟಾಕಿ ಸದ್ದಿನಿಂದ ರೈಲು ಬಂದಿದ್ದು, ಜನರಿಗೆ ತಿಳಿದೇ ಇಲ್ಲ. ಹಳಿ ಮೇಲೆ ನಿಂತಿದ್ದ ಜನರ ಎರಡೂ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. 
ಘಟನೆಯಲ್ಲಿ 72ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ಇದೀಗ ಸಾವಿನ ಸಂಖಅಯೆ 61ಕ್ಕೆ ಏರಿಕೆಯಾಗಿದೆ. 
ಅಮೃತಸರದಲ್ಲಿ ನಡೆದ ರೈಲು ಅಪಘಾತದ ಸುದ್ದಿ ತಿಳಿದ ಕೂಡಲೇ ಇದೀಗ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರು ಅಮೆರಿಕಾದಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮವನ್ನು ರದ್ದುಗೊಳಿಸಿ ಭಾರತಕ್ಕೆ ಆಗಮಿಸುತ್ತಿದ್ದಾರೆ. 
ರೈಲು ದುರಂತದ ಹಿನ್ನಲೆಯಲ್ಲಿ ಪಂಜಾಬ್ ಸರ್ಕಾರ ಶನಿವಾರ ಒಂದು ದಿನದ ಶೋಕಾಚರಣೆ ಘೋಷಿಸಿದ್ದು, ಸರ್ಕಾರಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳಲ್ಲಿ ಬಂದ್ ಆಚರಿಸಲು ಸೂಚಿಸಿದೆ. 
ಈ ನಡುವೆ ಇಸ್ರೇಲ್ ತೆರಳಬೇಕಿದ್ದ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ತಮ್ಮ ಪ್ರವಾಸವನ್ನು ಮುಂದೂಡಿ ಅಮೃತಸರಕ್ಕೆ ವಾಪಸ್ಸಾಗಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT