ರಾವಣ ದಹನದ ವೇಳೆ ಅಮೃತಸರದಲ್ಲಿ ಘೋರ ದುರಂತ: ಸಾವಿನ ಸಂಖ್ಯೆ 61ಕ್ಕೆ ಏರಿಕೆ 
ದೇಶ

ರಾವಣ ದಹನದ ವೇಳೆ ಅಮೃತಸರದಲ್ಲಿ ಘೋರ ದುರಂತ: ಸಾವಿನ ಸಂಖ್ಯೆ 61ಕ್ಕೆ ಏರಿಕೆ

ಪಂಜಾಬ್ ರಾಜ್ಯದ ಅಮೃತಸರ ಬಳಿ ಶುಕ್ರವಾರ ಸಂಜೆ ರಾವಣ ದಹನ ವೀಕ್ಷಿಸುತ್ತಿದ್ದವ ಮೇಲೆ ರೈಲು ಹರಿದು ದುರ್ಘಟನೆ ಸಂಭವಿಸಿದ್ದು, ಪ್ರಕರಣಕ್ಕೆ ಸಂಬಧಿಸಿದಂತೆ ಮೃತಪಟ್ಟವರ ಸಂಖ್ಯೆ ಇದೀಗ 61ಕ್ಕೆ...

ಅಮೃತಸರ: ಪಂಜಾಬ್ ರಾಜ್ಯದ ಅಮೃತಸರ ಬಳಿ ಶುಕ್ರವಾರ ಸಂಜೆ ರಾವಣ ದಹನ ವೀಕ್ಷಿಸುತ್ತಿದ್ದವ ಮೇಲೆ ರೈಲು ಹರಿದು ದುರ್ಘಟನೆ ಸಂಭವಿಸಿದ್ದು, ಪ್ರಕರಣಕ್ಕೆ ಸಂಬಧಿಸಿದಂತೆ ಮೃತಪಟ್ಟವರ ಸಂಖ್ಯೆ ಇದೀಗ 61ಕ್ಕೆ ಏರಿಕೆಯಾಗಿದೆ. 
ರೈಲ್ವೆ ಹಳಿ ಸಮೀಪದ ಮೈದಾನದಲ್ಲಿ ದಸರಾ ಪ್ರಯುಕ್ತ ರಾವಣ ದಹನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ರಾವಣನಿಗೆ ಬೆಂಕಿ ಹಚ್ಚಿ ಪಟಾಕಿ ಸಿಡಿಯಲು ಆರಂಭಿಸಿದಾಗ ದೂರದಲ್ಲಿ ನಿಂತಿದ್ದ ಜನ ರೈಲ್ವೆ ಹಳಿ ಬಳಿ ಬಂದಿದ್ದರು. ಈ ವೇಳೆ ಎರಡೂ ದಿಕ್ಕಿನಿಂದಲೂ ರೈಲೂ ವೇಗವಾಗಿ ಆಗಮಿಸಿದೆ. ಆದರೆ, ಪಟಾಕಿ ಸದ್ದಿನಿಂದ ರೈಲು ಬಂದಿದ್ದು, ಜನರಿಗೆ ತಿಳಿದೇ ಇಲ್ಲ. ಹಳಿ ಮೇಲೆ ನಿಂತಿದ್ದ ಜನರ ಎರಡೂ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. 
ಘಟನೆಯಲ್ಲಿ 72ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ಇದೀಗ ಸಾವಿನ ಸಂಖಅಯೆ 61ಕ್ಕೆ ಏರಿಕೆಯಾಗಿದೆ. 
ಅಮೃತಸರದಲ್ಲಿ ನಡೆದ ರೈಲು ಅಪಘಾತದ ಸುದ್ದಿ ತಿಳಿದ ಕೂಡಲೇ ಇದೀಗ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರು ಅಮೆರಿಕಾದಲ್ಲಿ ನಿಗದಿಯಾಗಿದ್ದ ಕಾರ್ಯಕ್ರಮವನ್ನು ರದ್ದುಗೊಳಿಸಿ ಭಾರತಕ್ಕೆ ಆಗಮಿಸುತ್ತಿದ್ದಾರೆ. 
ರೈಲು ದುರಂತದ ಹಿನ್ನಲೆಯಲ್ಲಿ ಪಂಜಾಬ್ ಸರ್ಕಾರ ಶನಿವಾರ ಒಂದು ದಿನದ ಶೋಕಾಚರಣೆ ಘೋಷಿಸಿದ್ದು, ಸರ್ಕಾರಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳಲ್ಲಿ ಬಂದ್ ಆಚರಿಸಲು ಸೂಚಿಸಿದೆ. 
ಈ ನಡುವೆ ಇಸ್ರೇಲ್ ತೆರಳಬೇಕಿದ್ದ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ತಮ್ಮ ಪ್ರವಾಸವನ್ನು ಮುಂದೂಡಿ ಅಮೃತಸರಕ್ಕೆ ವಾಪಸ್ಸಾಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT