ಘಟನಾ ಸ್ಥಳದಲ್ಲಿ ನೆರೆದಿರುವ ಜನರು 
ದೇಶ

ಅಮೃತಸರ ರೈಲು ದುರಂತ: ರೈಲು ಚಾಲಕನ ಬಂಧಿಸಿದ ಪಂಜಾಬ್ ಪೊಲೀಸರು

ಅಮೃತಸರ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲು ಚಾಲಕನನ್ನು ಪಂಜಾಬ್ ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ...

ಅಮೃತಸರ: ಅಮೃತಸರ ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ರೈಲು ಚಾಲಕನನ್ನು ಪಂಜಾಬ್ ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. 
ಲುಧಿಯಾನ ರೈಲ್ವೇ ನಿಲ್ದಾಣದ ಬಳಿ ರೈಲು ಚಾಲಕನನ್ನು ಬಂಧನಕ್ಕೊಳಪಡಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಪಂಜಾಬ್ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. 
ಘಟನೆ ಸಂಭವಿಸುವುದಕ್ಕೂ ಮುನ್ನ ಹಲವು ಬಾರಿ ಶಬ್ಧ ಮಾಡಲಾಗಿತ್ತು. ಗ್ರೀನ್ ಸಿಗ್ನಲ್ ನೀಡಲಾಗಿತ್ತು. ದಾರಿ ಸ್ಪಷ್ಟವಾಗಿದೆ ಎಂದು ಚಾಲನೆ ಮಾಡಿದ್ದೆವು. ಆದರೆ, ಹಳಿ ಮೇಲೆ ನೂರಾರು ಸಂಖ್ಯೆಯಲ್ಲಿ ಜನರಿರುವುದು ನಮಗೆ ತಿಲಿಯರಿಲ್ಲ ಎಂದು ವಿಚಾರಣೆ ವೇಳೆ ಚಾಲಕ ಹೇಳಿದ್ದಾನೆಂದು ತಿಳಿದುಬಂದಿದೆ. 
ಪಂಜಾಬ್ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಸುತ್ತಿದ್ದು, ಕಾರ್ಯಕ್ರಮವನ್ನು ಆಯೋಜಿಸಿದ್ದೂ ಕೂಡ ಕಾಂಗ್ರೆಸ್ ನಾಯಕರೇ ಆಗಿದ್ದಾರೆ. ಹೀಗಾಗಿ, ಕಾರ್ಯಕ್ರಮ ಆಯೋಜಕರ ವಿರುದ್ಧ ಅಧಿಕಾರಿಗಳು ಈ ವರೆಗೂ ಯಾವುದೇ ರೀತಿಯ ಕ್ರಮಗಳನ್ನು ಕೈಗೊಂಡಿಲ್ಲ ಎಂಬ ಮಾತುಗಳು ಕೇಳಿ ಬರತೊಡಗಿವೆ. 
ಈ ನಡುವೆ ರೈಲ್ವೇ ಅಧಿಕಾರಿಗಳೂ ಕೂಡ ದುರ್ಘಟನೆಗೆ ಸಂಬಂಧಿಸಿದಂತೆ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. ಜೋರಾ ಫಟಕ್ ಪ್ರದೇಶದಲ್ಲಿ ರೈಲ್ವೇ ಲೈನ್ ಮ್ಯಾನ್ ಇದ್ದರೂ, ಚಾಲಕರಿಗೆ ಹಳಿ ಮೇಲೆ ನೂರಾರು ಸಂಖ್ಯೆಯಲ್ಲಿ ಜನರಿರುವ ಬಗ್ಗೆ ಮಾಹಿತಿ ನೀಡಿರಲಿಲ್ಲ ಎಂಬುದು ಇದೀಗ ಬೆಳಕಿಗೆ ಬಂದಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT