ಡಿ.ಕೆ ಶಿವಕುಮಾರ್ ಮತ್ತು ಯಡಿಯೂರಪ್ಪ 
ದೇಶ

ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರಕ್ಕೆ ಕ್ಷಮೆ: ಡಿಕೆಶಿ ಪರ ಯಡಿಯೂರಪ್ಪ ಬ್ಯಾಟಿಂಗ್

ಡಿ.ಕೆ.ಶಿವಕುಮಾರ್ ತಮ್ಮ ಸ್ವಂತ ಅಭಿಪ್ರಾಯ ಹೇಳಿದ್ದಾರೆ. ಈ ಹೇಳಿಕೆ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ...

ಬೆಂಗಳೂರು: ಲಿಂಗಾಯತ ಸ್ವತಂತ್ರ ಧರ್ಮದ ವಿಚಾರಕ್ಕೆ ನಾವು ಕೈ ಹಾಕಬಾರದಿತ್ತು ಎಂಬ ಡಿ.ಕೆ ಶಿವಕುಮಾರ್​ ಅವರ ಹೇಳಿಕೆ ಬಗ್ಗೆ ಟೀಕೆ, ಟಿಪ್ಪಣಿಗಳು ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಡಿ.ಕೆ.ಶಿವಕುಮಾರ್ ತಮ್ಮ ಸ್ವಂತ ಅಭಿಪ್ರಾಯ ಹೇಳಿದ್ದಾರೆ.  ಈ ಹೇಳಿಕೆ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ, ಈ ಹೇಳಿಕೆಯನ್ನು ಎಲ್ಲರೂ ಸ್ವಾಗತಿಸಬೇಕು. ಕುಹಕ, ವಿರೋಧ ಯಾರಿಗೂ ಶೋಭೆಯಲ್ಲ. ಅವರ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ. ಅವರ ಹೇಳಿಕೆಯನ್ನು ನಾನು ಸ್ವಾಗತಿಸುತ್ತೇನೆ. ಇದರಲ್ಲಿ ನನಗೆ ಯಾವುದೇ ರಾಜಕಾರಣ ಕಾಣುತ್ತಿಲ್ಲ ಎಂದು ಡಿಕೆಶಿ ಪರ ಯಡಿಯೂರಪ್ಪ ಬ್ಯಾಟಿಂಗ್ ಮಾಡಿದ್ದಾರೆ.
ಯಡಿಯೂರಪ್ಪ ಅವರು ಸಚಿವ ಡಿ.ಕೆ ಶಿವಕುಮಾರ್​ ಅವರ ವಿಚಾರದಲ್ಲಿ ಯಾವುದೇ ಟೀಕೆಗೆ ಮುಂದಾಗದೆ, ಮೃಧು ಧೋರಣೆ ಅನುಸರಿಸಿದ್ದು, ಇದರ ಹಿಂದೆ ರಾಜಕೀಯ ಕಾರಣಗಳೂ ಇವೆ ಎನ್ನಲಾಗಿದೆ. ಡಿ.ಕೆ ಶಿವಕುಮಾರ್ ಪರ ಯಡಿಯೂರಪ್ಪ ಅವರ ಈ ಮೃಧುತ್ವದ ಧೋರಣೆ ಹಲವು ಕುತೂಹಲಗಳಿಗೆ ಎಡೆ ಮಾಡಿಕೊಟ್ಟಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT