ಸಂಗ್ರಹ ಚಿತ್ರ 
ದೇಶ

ಶಬರಿಮಲೆ ದಕ್ಷಿಣದ 'ಅಯೋಧ್ಯೆ', ಸುಪ್ರೀಂ ತೀರ್ಪು ವಿರುದ್ಧ ಪ್ರತಿಭಟಿಸುತ್ತಿರುವವರಿಗೆ ಧನ್ಯವಾದಗಳು; ವಿಹೆಚ್'ಪಿ

ಶಬರಿಮಲೆ ದಕ್ಷಿಣ ಭಾರತದ ಅಯೋಧ್ಯೆಯಿದ್ದಂತೆ. ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಪ್ರತಿಭಟಿಸುತ್ತಿರುವ ಭಕ್ತರಿಗೆ ಧನ್ಯವಾದಗಳು ಎಂದು ವಿಶ್ವ ಹಿಂದೂ ಪರಿಷತ್ ಶನಿವಾರ ಹೇಳಿದೆ...

ನವದೆಹಲಿ: ಶಬರಿಮಲೆ ದಕ್ಷಿಣ ಭಾರತದ ಅಯೋಧ್ಯೆಯಿದ್ದಂತೆ. ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಪ್ರತಿಭಟಿಸುತ್ತಿರುವ ಭಕ್ತರಿಗೆ ಧನ್ಯವಾದಗಳು ಎಂದು ವಿಶ್ವ ಹಿಂದೂ ಪರಿಷತ್ ಶನಿವಾರ ಹೇಳಿದೆ. 
ಶಬರಿಮಲೆ ವಿವಾದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ವಿಹೆಚ್'ಪಿ ವಕ್ತಾರ ವಿನೋದ್ ಬನ್ಸಾಲ್ ಅವರು, ಶಬರಿಮಲೆ ದಕ್ಷಿಣ ಭಾರತದ ಅಯೋಧ್ಯೆಯಿದ್ದಂತೆ. ಯಾವುದೇ ವಯೋಮಾನದ ಮಹಿಳೆಯರು ಕೇರಳದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶಬರಿಮಲೆ ಅಯ್ಯಪ್ಪ ದೇಗುಲ ಪ್ರವೇಶಿಸಬಹುದು ಎಂಬ ಸುಪ್ರೀಂಕೋರ್ಟ್ ತೀರ್ಪಿನ ವಿರುದ್ಧ ಭಕ್ತರು ತೀವ್ರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟಿಸುತ್ತಿರುವವರಿಗೆ ಈ ಮೂಲಕ ಧನ್ಯವಾದಗಳನ್ನು ಹೇಳುತ್ತೇನೆಂದು ಹೇಳಿದ್ದಾರೆ. 
ಸಿತಾರಾಮ್ ಯೆಚೂರಿಯವರು ಸ್ವತಃ ತಾವೇ ಶಬರಿಮಲೆಯನ್ನು ಅಯೋಧ್ಯೆಗೆ ಹೋಲಿಕೆ ಮಾಡಿರುವುದು ಉತ್ತಮವಾಗಿದೆ. ಹೌದು, ಶಬರಿಮಲೆ ದಕ್ಷಿಣ ಭಾರತದ ಅಯೋಧ್ಯೆಯೇ. ಶಬರಿಮಲೆಯ ಪವಿತ್ರತೆ, ಧಾರ್ಮಿಕ ನಂಬಿಕೆಗಳ ಮೇಲೆ ದಾಳಿಯಾಗುತ್ತಿರುವುದನ್ನು ನೋಡಿದರೆ ಸಿಪಿಐ(ಎಂ)ನ ವಾಸ್ತವಿಕತೆ ಬಹಿರಂಗಗೊಳ್ಳುತ್ತಿದೆ. ಕೇರಳ ಕ್ರೈಸ್ತ ಸನ್ಯಾಸಿನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಕಣ್ಣು ಕಾಣದಂತೆ ವರ್ತಿಸುತ್ತಿದೆ. ದೇಗುಲದ ಪವಿತ್ರತೆಯನ್ನು ಉಳಿಸುವ ಸಲುವಾಗಿ ಜನರು ಪ್ರತಿಭಟನೆ ನಡೆಸುತ್ತಿರುವುದನ್ನು ಪ್ರಶಂಸಿಸುತ್ತೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT