ತಿರುವನಂತಪುರಂ: ಶಬರಿಮಲೆಗೆ ಶುಕ್ರವಾರ ಭೇಟಿ ನೀಡಿದ್ದ 9 ವರ್ಷದ ಬಾಲಕಿಯೊಬ್ಬಳು, ನನಗೆ 50 ವರ್ಷ ತುಂಬಿದ ನಂತರ ನಾನು ಮತ್ತೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಬರುತ್ತೇನೆ ಎಂಬ ಭಿತ್ತಿ ಪತ್ರ ಹಿಡಿದು ಎಲ್ಲರ ಗಮನ ಸೆಳೆದಳು.
ತಮಿಳುನಾಡಿನ ಮಧುರೈ ಮೂಲದ ಜನನಿ ಎಂಬ ಬಾಲಕಿ ನಿನ್ನೆ ತನ್ನ ಪೋಷಕರೊಂದಿಗೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದಳು.
ಸುಪ್ರೀಂ ಕೋರ್ಟ್ ಆದೇಶದ ಬಗ್ಗೆ ನಮಗೆ ಏನೂ ಗೊತ್ತಿಲ್ಲ. ನನ್ನ ಮಗಳಿಗೆ 10 ವರ್ಷ ತುಂಬಿದ ನಂತರ ದೇವಸ್ಥಾನಕ್ಕೆ ಬರಲ್ಲ. ಅವಳು 50 ವರ್ಷದವಳಾಗುವವರೆಗೆ ಕಾಯುತ್ತಾಳೆ ಎಂದು ಜನನಿ ತಂದೆ ಆರ್ ಸತೀಶ್ ಕುಮಾರ್ ಅವರು ಹೇಳಿದ್ದಾರೆ.
50 ವರ್ಷ ತುಂಬುವ ಮೊದಲೆ ಅವರು ಮತ್ತೆ ದೇವಸ್ಥಾನಕ್ಕೆ ಬರುವುದು ನನಗೆ ಇಷ್ಟವಿಲ್ಲ ಎಂದು ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ.
ಶಬರಿಮಲೆ ದೇವಸ್ಥಾನಕ್ಕೆ 10ರಿಂದ 50 ವರ್ಷದೊಳಗಿನ ಮಹಿಳೆಯರ ಪ್ರವೇಶಕ್ಕೆ ನಿಷೇಧ ಹೇರಲಾಗಿದ್ದು, ಈ ನಿಷೇಧ ತೆರವುಗೊಳಿಸಿದ್ದ ಸುಪ್ರೀಂ ಕೋರ್ಟ್, ಎಲ್ಲಾ ವಯಸ್ಸಿನ ಮಹಿಳೆಯರಿಗೂ ಮುಕ್ತ ಪ್ರವೇಶ ಅವಕಾಶ ಕಲ್ಲಿಸಿದೆ. ಸುಪ್ರೀಂ ಕೋರ್ಟ್ ಆದೇಶ ಲೆಕ್ಕಿಸದೇ ನೂರಾರು ಭಕ್ತರು ದೇವಸ್ಥಾನಕ್ಕೆ ಮಹಿಳೆಯರು ಪ್ರವೇಶಿಸದಂತೆ ತಡೆಯುತ್ತಿದ್ದಾರೆ.